Daily Horoscope

Select Your Language

Notifications

webdunia
webdunia
webdunia
webdunia

ನಾನೇ ಎಷ್ಟೇ ದೊಡ್ಡ ಸ್ಥಾನದಲ್ಲಿದ್ರೂ, ಇಲ್ಲಿ ಮಾತ್ರ ನಿಮ್ಮ ಮನೆ ಮಗ: ಡಿಕೆ ಶಿವಕುಮಾರ್‌

CM DK Shikumar
ಬೆಂಗಳೂರು: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮಾತ್ರ ಮುಖ್ಯಮಂತ್ರಿಯಲ್ಲ, ನಿಮ್ಮ ಮನೆ ಮಗ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. 

ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿ ಸ್ವಾಗತ ಕೋರಿದರು.

ಕಗ್ಗಲಿಪುರಕ್ಕೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕರ್ತರು ಪಟಾಕಿ ಸಿಡಿಸಿ ಭರ್ಜರಿ ಸ್ವಾಗತ ನೀಡಿದ್ದಾರೆ. 

ಈ ವೇಳೆ ಮಾತನಾಡಿದ ಅವರು, ಪ್ರತಿ ಸಂದರ್ಭದಲ್ಲೂ ನೀವು ನನ್ನನ್ನು ಪ್ರೀತಿಯಿಂದ ಕಂಡಿದ್ದೀರಿ. ನನಗಾಗಿ ಹೋರಾಟ ಮಾಡಿದ್ದೀರಿ, ಪ್ರಾರ್ಥನೆ ಮಾಡಿದ್ದೀರಿ. ನಿಮಗೆಲ್ಲ ಶುಭವಾಗಲಿ. ನಿಮ್ಮ ಶಾಸಕ ಸೋಮಶೇಖರ್ ನನ್ನ ಜೊತೆ ಇದ್ದಾರೆ. ನಾನು ಕೂಡ ನಿಮ್ಮ ಜೊತೆ ಇರುತ್ತೇನೆ. ನಿಮ್ಮ ಸಮಸ್ಯೆ ಬಗೆಹರಿಸಲು ಯಾವಾಗಲು ಸಿದ್ಧನಾಗಿದ್ದೇನೆಂದು ಅವರು ಹೇಳಿದರು. 

ಹಾರೋಹಳ್ಳಿ ಸರ್ಕಲ್‌ನಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಬ್ಯಾನರ್‌ಗಳು, ಕಟೌಟ್‌ಗಳು ಹಾಗೂ ಕಾಂಗ್ರೆಸ್ ಬಾವುಟಗಳಿಂದ ಪಟ್ಟಣ ಸಿಂಗಾರಗೊಂಡಿತ್ತು. ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಜಮಾಯಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಾಹೇಬ್ರು ಮೆಟ್ರೋದಲ್ಲಿ... ಡಿಕೆ ಶಿವಕುಮಾರ್ ನೋಡಿ ಜನರು ಫುಲ್ ಸರ್ಪೈಸ್ Video