ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇನೆ-ಸಿಎಂ

Webdunia
ಭಾನುವಾರ, 2 ಜುಲೈ 2023 (19:33 IST)
ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾ ಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ರು. 
 
ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಸಿದ್ದರಾಮಯ್ಯ ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಕಾಗಿನೆಲೆ ಮಹಾಸಂಸ್ಥಾನಕ್ಕೆ ನಾಂದಿ ಹಾಡಲಾಯಿತು. ಮೊದಲ ಸ್ವಾಮೀಜಿ ತಾರಕಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಯಶಸ್ವಿಯಾಗಿ ಸಾಮಾಜಿಕ ಚಟುವಟಿಕೆ ಮಾಡಿಕೊಂಡು ಬರುತ್ತಿರುವ ಪೀಠ ಈಗ ನಿರಂಜನಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಮಾಜಮುಖಿಯಾಗಿ ನಡೆಯುತ್ತಿದೆ ಎಂದರು. 
 
ನಾವು ಚುನಾವಣೆ ವೇಳೆ ನೀಡಿರುವ ಐದೂ ಗ್ಯಾರಂಟಿಗಳನ್ನು ಎಷ್ಟೇ ಕಷ್ಟ ಬಂದರೂ ಜಾರಿ ಮಾಡುತ್ತೇವೆ. ಯಾರೇ ಆಡಿಕೊಂಡರೂ ಈ ವರ್ಷದ ಬಜೆಟ್ ನಲ್ಲೇ ಐದೂ ಘೋಷಣೆಗಳಿಗೂ ಹಣ ಕೊಡುತ್ತೇವೆ. ನಮ್ಮ ಐದೂ ಘೋಷಣೆಗಳು ಜಾತಿ-ಧರ್ಮ ಮೀರಿದವುಗಳು. ಸರ್ವ ಜನಾಂಗದ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಇವರ ಸಂಕಷ್ಟ ನಿವಾರಣೆಗೆ ಈ ಐದು ಘೋಷಣೆಗಳನ್ನು ಈಡೇರಿಸುತ್ತಿದ್ದೇವೆ ಎಂದರು. 
 
ನಾನು ಅಧಿಕಾರದಲ್ಲಿ ಇರುವವರೆಗೂ ಶೋಷಿತ ಜಾತಿಗಳಿಗೆ, ದಲಿತ ಸಮುದಾಯಗಳಿಗೆ, ಅಲ್ಪ ಸಂಖ್ಯಾತ ಸಮುದಾಯಗಳ, ಎಲ್ಲಾ ಜಾತಿಯ ಬಡವರ ಏಳಿಗೆಗೆ ಶ್ರಮಿಸುತ್ತೇನೆ. ಹೋರಾಟ ಮಾಡಿಯೇ ಮಾಡುತ್ತೇನೆ ಎಂದು ಭರವಸೆ ನೀಡಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಂಡಿಗೆ ಗಟ್ಟಿ ಮಾಡಿಕೊಳ್ಳಿ.. ಎದೆ ಝಲ್ಲೆನಿಸುವಂತಿದೆ ಈ ಅಪಘಾತದ ವಿಡಿಯೋ Video

ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುತ್ತಿರುವ ಬಗ್ಗೆ ಫೋಟೋ, ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

ಮಸೀದಿ ಒಳಗೆ ಎಸ್ಐಆರ್ ನಡೆಸಲಾಗ್ತಿದೆ: ಬಿವೈ ವಿಜಯೇಂದ್ರ ಗಂಭೀರ ಆರೋಪ

ಹೀಗೂ ರಾಜೀನಾಮೆ ಪತ್ರ ಬರೀತಾರಾ.. ಮಹಿಳೆ ಬರೆದ ರಾಜೀನಾಮೆ ಪತ್ರ ನೋಡಿದ್ರೆ ಶಾಕ್ ಆಗ್ತೀರಾ

ಫೋಟೋ ತೆಗೆಯುವಾಗ ಯುವತಿಯ ಸೆರಗು ಜಾರಿತ್ತು... ಯುವಕ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ
Show comments