Select Your Language

Notifications

webdunia
webdunia
webdunia
webdunia

ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ- ಕುಮಾರಸ್ವಾಮಿ

ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ- ಕುಮಾರಸ್ವಾಮಿ
ಕೊಪ್ಪಳ , ಸೋಮವಾರ, 22 ಜನವರಿ 2018 (08:48 IST)

ನಾನು ಇನ್ನೂ ಎಷ್ಟು ದಿನ ಬದುಕುತ್ತೇನೆ ಎನ್ನುವುದು ಗೊತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕೊಪ್ಪಳದಲ್ಲಿ ನಡೆದ ಜೆಡಿಎಸ್ ಸೇರ್ಪಡೆ ಹಾಗೂ ಸಮಾವೇಶದಲ್ಲಿ ಮಾತನಾಡಿದ ಅವರು, ಹೃದಯ ಸಂಬಂಧಿ ಕಾಯಿಲೆಯಿಂದ ಇಸ್ರೇಲ್ ಪ್ರವಾಸಕ್ಕೆ ಹೋಗಿದ್ದಾಗ ಸಾಯಬೇಕಿತ್ತು. ಆದರೆ, ನಿಮ್ಮೆಲ್ಲರ ಆಶೀರ್ವಾದದಿಂದ ಕೃಷ ಅಧ್ಯಯನ ಮಾಡಿ, ಮರಳಿ ಬಂದಿದ್ದೇನೆ ಎಂದು ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ಸಿದ್ದರಾಮಯ್ಯ ಉಚಿತವಾಗಿ ಅಕ್ಕಿ ಕೊಟ್ಟಿದ್ದೇನೆ ಎನ್ನುತ್ತಿದ್ದಾರೆ. ಅವರು ಅಕ್ಕಿ ಕೊಡುವವರೆಗೆ ಎಲ್ಲರೂ ಉಪವಾಸದಿಂದ ಇದ್ದರೇ ಎಂದು ಪ್ರಶ್ನಿಸಿದ್ದಾರೆ.

ಮೋಸ ಮಾಡಲಾಗಿದೆ ಎಂದು ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಿ ಮುಖ್ಯಮಂತ್ರಿಯಾಗಿ ಏನು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ನನಗೆ 113 ಶಾಸಕರನ್ನು ನೀಡಿದರೆ ನಾನು ನಿಮ್ಮೆಲ್ಲರನ್ನು ಹೇಗೆ ಮಾಡುತ್ತೇನೆ ನೋಡಿ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

‘2019 ರಲ್ಲಿ ಪ್ರಧಾನಿಯಾಗೋದು ರಾಹುಲ್ ಗಾಂಧಿನೇ’