ರಾಮನವಮಿಗೆ ಬೆಂಗಳೂರಿನಲ್ಲಿ ಮಾಂಸ ಮಾರಾಟವಿಲ್ಲ

Krishnaveni K
ಮಂಗಳವಾರ, 16 ಏಪ್ರಿಲ್ 2024 (10:09 IST)
Photo Courtesy: Twitter
ಬೆಂಗಳೂರು: ನಾಳೆ ದೇಶದಾದ್ಯಂತ ರಾಮ ನವಮಿ ಸಂಭ್ರಮದಿಂದ ಆಚರಿಸಲಾಗುತ್ತದೆ. ರಾಮನವಮಿ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ನಿಷೇಧ ಹೇರಿಸಲಾಗಿದೆ.

ಚೈತ್ರ ಮಾಸದ ಶುಕ್ಲ ಪಕ್ಷದ ಒಂಭತ್ತನೇ ದಿನವನ್ನು ರಾಮ ನವಮಿಯಾಗಿ ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಬಿಬಿಎಂಪಿ ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ನಿಷೇಧ ಹೇರಿದೆ. ಪ್ರಾಣಿ ವಧೆಯನ್ನು ಒಂದು ದಿನದ ಮಟ್ಟಿಗೆ ನಿಷೇಧಿಸಲಾಗುತ್ತಿದೆ.  ಹೀಗಾಗಿ ನಾಳೆ ಮಾಂಸ ಸಿಗಲ್ಲ.

ಸಾಮಾನ್ಯವಾಗಿ ಪ್ರತೀ ಬಾರಿಯೂ ರಾಮನವಮಿ ಸಂದರ್ಭದಲ್ಲಿ ನಗರದಲ್ಲಿ ಮಾಂಸ ಮಾರಾಟ ನಿಷೇಧಿಸಲಾಗುತ್ತದೆ. ಅದೇ ರೀತಿ ಈ ಬಾರಿಯೂ ನಿಷೇಧ ಹೇರಲಾಗಿದೆ. ಬಿಬಿಎಂಪಿಯ ಪಶು ಸಂಗೋಪನಾ ಇಲಾಖೆ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದೆ.  ಹಿಂದೂಗಳ ನಂಬಿಕೆ ಪ್ರಕಾರ ಇಂದು ಪ್ರಭು ಶ್ರೀರಾಮ ಹುಟ್ಟಿದ ದಿನ.

ಇಂದು ಚೈತ್ರ ಮಾಸ ನವರಾತ್ರಿಯೂ ಕೊನೆಗೊಳ್ಳುತ್ತಿದೆ. ಇಂದು ನಗರದಾದ್ಯಂತ ದೇವಾಲಯಗಳಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಕೆಯಾಗಲಿದೆ. ಜೊತೆಗೆ ಬೀದಿ ಬೀದಿಯಲ್ಲಿ ಪಾನಕ, ಕೋಸಂಬರಿ ಹಂಚಿ ರಾಮ ನವಮಿಯನ್ನು ಸಂಭ‍್ರಮದಿಂದ ಆಚರಿಸಲಾಗುತ್ತದೆ. ಸ್ವತಃ ಮಹಾವಿಷ್ಣುವಿನ ಏಳನೇ ಅವತಾರವಾಗಿ ಶ್ರೀರಾಮಚಂದ್ರ ದಶರಥ ಮಹಾರಾಜನ ಪುತ್ರನಾಗಿ ಭೂಮಿಗೆ ಬಂದ ದಿನವಿಂದು. ಈ ಬಾರಿ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿಯಲ್ಲಿ ಮಂದಿರ ಲೋಕಾರ್ಪಣೆಗೊಂಡಿರುವುದು ಸಂಭ್ರಮ ಹೆಚ್ಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments