Webdunia - Bharat's app for daily news and videos

Install App

ರಾಜ್ಯದಲ್ಲಿ ಮನೆ ಕಟ್ಟಲು ಮರಳು ಸಿಗುವುದಿಲ್ಲ...!!!

Webdunia
ಬುಧವಾರ, 17 ಆಗಸ್ಟ್ 2022 (19:06 IST)
ರಾಜ್ಯದಲ್ಲಿ ಅಗತ್ಯಕ್ಕೆ ತಕ್ಕಷ್ಟು ಮರಳು ಒದಗಿಸುವ ಉದ್ದೇಶದಿಂದ 'ಎಂ ಸ್ಯಾಂಡ್' ಉತ್ಪಾದನೆ ಹೆಚ್ಚಿಸಲಾಗುವುದು. ಈ ಸಂಬಂಧ ಮರಳು ನೀತಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
 
ದಿನೇ ದಿನೆ ರಾಜ್ಯದಲ್ಲಿ ಮರಳಿನ ಬೇಡಿಕೆ ಹೆಚ್ಚಾಗುತ್ತಿದೆ. ಅಗತ್ಯದಷ್ಟು ಮರಳು ಪೂರೈಕೆ ಮಾಡುವ ಉದ್ದೇಶದಿಂದ ಎಂ ಸ್ಯಾಂಡ್ ಉತ್ಪಾದನೆಗಾಗಿ ಕಲ್ಲು ಪುಡಿ ಮಾಡುವ ಘಟಕಗಳಿಗೆ ಸರ್ಕಾರದಿಂದ ಹೆಚ್ಚಿನ ಪರವಾನಗಿ ನೀಡಲಿದೆ. ಮರಳು ಮಾಫಿಯಾದ ತಾಂಡವವಾಡುತ್ತಿರುವ ಇಂದಿನ ಸಂದರ್ಭದಲ್ಲಿ ಅದಕ್ಕೆ ಶಾಸ್ವತವಾಗಿ ಕೊನೆಗಾಣಿಸಲು ಮರಳು ನೀತಿಯಲ್ಲಿನ ತಿದ್ದುಪಡಿ ಅಗತ್ಯವಾಗಿದೆ ಎಂದರು.
 
ರಾಜ್ಯದಲ್ಲಿ ವಾರ್ಷಿಕವಾಗಿ 45ಲಕ್ಷ ಮೆಟ್ರಿಕ್ ಟನ್‌ನಷ್ಟು ಲಭ್ಯವಿದ್ದು, ಹಾಲಿ ಸುಮಾರು ಐದು ಲಕ್ಷ ಮೆಟ್ರಿಕ್ ಟನ್ ಕೊರತೆ ಎದುರಿಸುತ್ತಿದ್ದೇವೆ. ಈ ಕಾರಣಕ್ಕೆ ಎಂ ಸ್ಯಾಂಡ್‌ ಗೆ ಉತ್ಪಾದನೆ ಹೆಚ್ಚಿಸಲು ಸೂಚಿಸುವ ಅಗತ್ಯವಾಗಿದೆ ಎಂದು ಸಚಿವರು ವಿವರಿಸಿದರು.
 
ಮರಳು ಕೊರತೆ ನೀಗಿಸಲು ವಿವಿಧ ಎಂ ಸ್ಯಾಂಡ್ ಉತ್ಪಾದನಾ ಘಟಕಗಳಿಂದ 35ಲಕ್ಷ ಮೆಟ್ರಿಕ್ ಟನ್‌ನಷ್ಟು ಮರಳು ಪೂರೈಕೆ ಮಾಡಲಾಗುತ್ತಿದೆ. ವಿವಿಧ ನೈಸರ್ಗಿಕ ಮೂಲಗಳಿಂದ ರಾಜ್ಯದಲ್ಲಿ ಒಟ್ಟು ಸುಮಾರು ಐದು ಲಕ್ಷ ಮೆಟ್ರಿಕ್ ಟನ್‌ ಮರಳನ್ನು ಹೊರತೆಯಲಾಗುತ್ತಿದೆ. ಹೀಗಿದ್ದರೂ ಐದು ಲಕ್ಷ ಮೆಟ್ರಿಕ್ ಟನ್ ಮರಳಿನ ಕೊರತೆ ಸಮಸ್ಯೆ ಎದುರಾಗಿದ್ದರಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments