Select Your Language

Notifications

webdunia
webdunia
webdunia
webdunia

ಐಟಿ ದಾಳಿಗೆ ಭಯಪಡುವ ಅಗತ್ಯವಿಲ್ಲ: ಸಿಎಂಗೆ ವೇಣುಗೋಪಾಲ್ ಅಭಯ

ಐಟಿ ದಾಳಿಗೆ ಭಯಪಡುವ ಅಗತ್ಯವಿಲ್ಲ: ಸಿಎಂಗೆ ವೇಣುಗೋಪಾಲ್ ಅಭಯ
ಬೆಂಗಳೂರು , ಬುಧವಾರ, 2 ಆಗಸ್ಟ್ 2017 (16:50 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಗೆ ಭಯಪಡುವ ಅಗತ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆಭಯ ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿದ ವೇಣುಗೋಪಾಲ್, ಪಕ್ಷದ ಹೈಕಮಾಂಡ್‌ಗೆ ಎಲ್ಲಾ ವಿಷಯಗಳ ಬಗ್ಗೆ ಮಾಹಿತಿಯಿದೆ. ಕಾಂಗ್ರೆಸ್ ನಾಯಕರು ಪ್ರತಿ ಗಂಟೆಗೊಮ್ಮೆ ಹೈಕಮಾಂಡ್‌ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
 
ಗುಜರಾತ್ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ನಾಯಕರನ್ನು ಬೆದರಿಸುವ ತಂತ್ರ ಮಾಡುತ್ತಿದ್ದಾರೆ. ಆದರೆ, ಇಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ ಎಂದು ತಿಳಿಸಿದ್ದಾರೆ.
 
ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆಶ್ರಯ ನೀಡಿರುವುದಕ್ಕೆ ಐಟಿ ದಾಳಿ ನಡೆಸಲಾಗಿದೆ ಎನ್ನುವುದು ಸ್ಪಷ್ಟವಾಗಿದೆ.ಆದರೆ, ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವು ಖಚಿತವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

11 ಕೋಟಿ ರೂಪಾಯಿ ಸಿಕ್ಕಿದೆ ಎಂಬ ಮಾಹಿತಿ ತಪ್ಪು: ಐಟಿ ಅಧಿಕಾರಿಗಳು