Select Your Language

Notifications

webdunia
webdunia
webdunia
webdunia

ವಿಶ್ವ ಕನ್ನಡ ಸಮ್ಮೇಳನ ಮುಂದೂಡುವ ಅಗತ್ಯವಿಲ್ಲ: ಚಿದಾನಂದ ಮೂರ್ತಿ

ವಿಶ್ವ ಕನ್ನಡ ಸಮ್ಮೇಳನ ಮುಂದೂಡುವ ಅಗತ್ಯವಿಲ್ಲ: ಚಿದಾನಂದ ಮೂರ್ತಿ
ಬೆಂಗಳೂರು , ಮಂಗಳವಾರ, 18 ಜುಲೈ 2017 (14:11 IST)
ರಾಜ್ಯದಲ್ಲಿ ಬರ ಎದುರಾಗಿದ್ದರಿಂದ ವಿಶ್ವ ಕನ್ನಡ ಸಮ್ಮೇಳನ ಮುಂದೂಡಿ ಎನ್ನುವ ಚಂಪಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಾಹಿತಿ ಚಿದಾನಂದ ಮೂರ್ತಿ, ವಿಶ್ವ ಕನ್ನಡ ಸಮ್ಮೇಳನ ಮುಂದೂಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
 
ವಿಶ್ವಕನ್ನಡ ಸಮ್ಮೇಳನವನ್ನು ಸರಳವಾಗಿ ಆಚರಿಸಿದರೆ ಸಾಕು. ಇದರಿಂದ ಸರಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ, ವಿಶ್ವಕನ್ನಡ ಸಮ್ಮೇಳನ ಆಯೋಜನೆಗೆ ನೆರವಾಗುವುದರೊಂದಿಗೆ ರೈತರ ಸಂಕಷ್ಟಗಳಿಗೂ ನೆರವಾಗಲಿ ಎಂದು ಸಲಹೆ ನೀಡಿದ್ದಾರೆ. 
 
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರಿಂದ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಸಾಹಿತಿಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

10 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಚಿಕ್ಕಪ್ಪ