Webdunia - Bharat's app for daily news and videos

Install App

ರಾಜ್ಯಕ್ಕೆ ಬಂದ ಆಡ್ವಾಣಿಯವರಿಗೆ ಕ್ಯಾರೆ ಎನ್ನದ ಬಿಜೆಪಿ ನಾಯಕರು

Webdunia
ಶನಿವಾರ, 2 ಡಿಸೆಂಬರ್ 2017 (16:23 IST)
ಬಿಜೆಪಿ ನಾಯಕರಿಂದ ಉಕ್ಕಿನ ಮನುಷ್ಯ, ಭೀಷ್ಮ ಎಂದು ಕರೆಸಿಕೊಳ್ಳುತ್ತಿದ್ದ ಹಿರಿಯ ನಾಯಕ ಆಡ್ವಾಣಿ ರಾಜ್ಯಕ್ಕೆ ಬಂದರೂ ರಾಜ್ಯ ಬಿಜೆಪಿ ನಾಯಕರು ಕ್ಯಾರೆ ಎನ್ನದಿರುವ ಅಂಶ ಬೆಳಕಿಗೆ ಬಂದಿದೆ.

ಅವಧೂತ ದತ್ತಪೀಠದ ಶ್ರೀಗಣಪತಿ ಸಚ್ಚಿದಾನಂದ ಆಶ್ರಮದ ಆಂಜನೇಯ ವಿಗ್ರಹಕ್ಕೆ ಅಳವಡಿಸಿರುವ ವಿಶೇಷ ಶಾಶ್ವತ ಪ್ರೊಜೆಕ್ಷನ್ ಪ್ರದರ್ಶನವನ್ನು ಲೋಕಾರ್ಪಣೆ ಮಾಡಲು ರಾಜ್ಯಕ್ಕೆ ಆಗಮಿಸಿದ್ದ ಆಡ್ವಾಣಿಯವರನ್ನು ಸ್ವಾಗತಿಸಲು ಕೂಡಾ ಯಾರೊಬ್ಬ ಪ್ರಮುಖ ನಾಯಕರು ಉಪಸ್ಥಿತರಿರಲಿಲ್ಲವೆಂದು ಮೂಲಗಳು ತಿಳಿಸಿವೆ. 
 
ಮಾಜಿ ಉಪಪ್ರಧಾನಿ ಆಡ್ವಾಣಿಯವರ ಭೇಟಿ ಬಹುದಿನಗಳ ಹಿಂದೆಯೇ ನಿಗದಿಯಾಗಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರಾಗಲಿ, ಕಾರ್ಯದರ್ಶಿಗಳಾಗಲಿ, ಮಾಜಿ ಸಚಿವರು, ಶಾಸಕರು ಹಾಜರಿರದಿರುವುದು ಬಿಜೆಪಿ ಪಕ್ಷದಲ್ಲಿರುವ ಅಪಸ್ವರ ಹೊರಹಾಕಿದೆ ಎನ್ನಲಾಗುತ್ತಿದೆ.
 
ಬಿಜೆಪಿ ಪಕ್ಷದ ಏಳಿಗೆಗಾಗಿ ಹಗಲಿರಳು ಶ್ರಮಿಸಿದ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಯಾವುದೇ ಕೆಲಸಕ್ಕೆ ಬಾರದವರು ಎನ್ನುವಂತೆ ಬಿಜೆಪಿ ನಾಯಕರು ನಡೆದುಕೊಂಡ ರೀತಿ ಮುಂದೆ ಅಧಿಕಾರ ಕಳೆದುಕೊಂಡ ಕೂಡಲೇ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಬಂದರೂ ಬರಬಹುದು ಎಂದು ಆಡ್ವಾಣಿ ಅಭಿಮಾನಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿರುವುದು ಕಂಡುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments