ರಾಜ್ಯಕ್ಕೆ ಬಂದ ಆಡ್ವಾಣಿಯವರಿಗೆ ಕ್ಯಾರೆ ಎನ್ನದ ಬಿಜೆಪಿ ನಾಯಕರು

Webdunia
ಶನಿವಾರ, 2 ಡಿಸೆಂಬರ್ 2017 (16:23 IST)
ಬಿಜೆಪಿ ನಾಯಕರಿಂದ ಉಕ್ಕಿನ ಮನುಷ್ಯ, ಭೀಷ್ಮ ಎಂದು ಕರೆಸಿಕೊಳ್ಳುತ್ತಿದ್ದ ಹಿರಿಯ ನಾಯಕ ಆಡ್ವಾಣಿ ರಾಜ್ಯಕ್ಕೆ ಬಂದರೂ ರಾಜ್ಯ ಬಿಜೆಪಿ ನಾಯಕರು ಕ್ಯಾರೆ ಎನ್ನದಿರುವ ಅಂಶ ಬೆಳಕಿಗೆ ಬಂದಿದೆ.

ಅವಧೂತ ದತ್ತಪೀಠದ ಶ್ರೀಗಣಪತಿ ಸಚ್ಚಿದಾನಂದ ಆಶ್ರಮದ ಆಂಜನೇಯ ವಿಗ್ರಹಕ್ಕೆ ಅಳವಡಿಸಿರುವ ವಿಶೇಷ ಶಾಶ್ವತ ಪ್ರೊಜೆಕ್ಷನ್ ಪ್ರದರ್ಶನವನ್ನು ಲೋಕಾರ್ಪಣೆ ಮಾಡಲು ರಾಜ್ಯಕ್ಕೆ ಆಗಮಿಸಿದ್ದ ಆಡ್ವಾಣಿಯವರನ್ನು ಸ್ವಾಗತಿಸಲು ಕೂಡಾ ಯಾರೊಬ್ಬ ಪ್ರಮುಖ ನಾಯಕರು ಉಪಸ್ಥಿತರಿರಲಿಲ್ಲವೆಂದು ಮೂಲಗಳು ತಿಳಿಸಿವೆ. 
 
ಮಾಜಿ ಉಪಪ್ರಧಾನಿ ಆಡ್ವಾಣಿಯವರ ಭೇಟಿ ಬಹುದಿನಗಳ ಹಿಂದೆಯೇ ನಿಗದಿಯಾಗಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರಾಗಲಿ, ಕಾರ್ಯದರ್ಶಿಗಳಾಗಲಿ, ಮಾಜಿ ಸಚಿವರು, ಶಾಸಕರು ಹಾಜರಿರದಿರುವುದು ಬಿಜೆಪಿ ಪಕ್ಷದಲ್ಲಿರುವ ಅಪಸ್ವರ ಹೊರಹಾಕಿದೆ ಎನ್ನಲಾಗುತ್ತಿದೆ.
 
ಬಿಜೆಪಿ ಪಕ್ಷದ ಏಳಿಗೆಗಾಗಿ ಹಗಲಿರಳು ಶ್ರಮಿಸಿದ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಯಾವುದೇ ಕೆಲಸಕ್ಕೆ ಬಾರದವರು ಎನ್ನುವಂತೆ ಬಿಜೆಪಿ ನಾಯಕರು ನಡೆದುಕೊಂಡ ರೀತಿ ಮುಂದೆ ಅಧಿಕಾರ ಕಳೆದುಕೊಂಡ ಕೂಡಲೇ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಬಂದರೂ ಬರಬಹುದು ಎಂದು ಆಡ್ವಾಣಿ ಅಭಿಮಾನಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿರುವುದು ಕಂಡುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments