Select Your Language

Notifications

webdunia
webdunia
webdunia
webdunia

ಬಿಜೆಪಿಯ ಒಬ್ಬನೇ ಒಬ್ಬ ನಾಯಕನಿಗೆ ನನ್ನನ್ನು ಪ್ರಶ್ನಿಸುವ ತಾಕತ್ತಿಲ್ಲ: ಡಿಕೆಶಿ ಗುಡುಗು

ಬಿಜೆಪಿಯ ಒಬ್ಬನೇ ಒಬ್ಬ ನಾಯಕನಿಗೆ ನನ್ನನ್ನು ಪ್ರಶ್ನಿಸುವ ತಾಕತ್ತಿಲ್ಲ: ಡಿಕೆಶಿ ಗುಡುಗು
ಕಲಬುರಗಿ , ಶನಿವಾರ, 25 ಫೆಬ್ರವರಿ 2017 (17:22 IST)
ಜಿಲ್ಲೆಯ ಚಿತಾಪುರ್ ತಾಲೂಕಿನಲ್ಲಿ ಬಿಜೆಪಿ ಪ್ರತಿಭಟನಾಕಾರರು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಘೇರಾವ್ ಹಾಕಿದ ಘಟನೆ ನಡೆಯಿತು 
 
ಬಿಜೆಪಿ ಪ್ರತಿಭಟನಾಕಾರರಿಗೆ ಆವಾಜ್ ಹಾಕಿದ ಡಿಕೆಶಿ, ಇಂತಹ ಆಟಗಳು ನನ್ನ ಬಳಿ ನಡೆಯಲ್ಲ. ಬಿಜೆಪಿಯ ಒಬ್ಬನೇ ಒಬ್ಬ ನಾಯಕನಿಗೆ ನನ್ನನ್ನು ಪ್ರಶ್ನಿಸುವ ತಾಕತ್ತಿಲ್ಲ ಎಂದು ಗುಡುಗಿದರು.
 
ವಿಧಾನಪರಿಷತ್ ಸದಸ್ಯ ಗೋವಿಂದರಾಜು ಅವರ ಮನೆಯಲ್ಲಿ ದೊರೆತ ಡೈರಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಸರು ಉಲ್ಲೇಖವಾಗಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
 
ಬಿಜೆಪಿ ಕಾರ್ಯಕರ್ತರ ಘೇರಾವ್‌ನಿಂದ ಆಕ್ರೋಶಗೊಂಡ ಸಚಿವ ಡಿ.ಕೆ.ಶಿವಕುಮಾರ್, ಡೈರಿ ವಿಷಯದಲ್ಲಿ ವಿಪಕ್ಷಗಳ ಷಡ್ಯಂತ್ರ ಅಡಗಿದೆ. ಡೈರಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಡೈರಿ ವಿವಾದ: ಸಿಎಂ ಸಿದ್ದರಾಮಯ್ಯರೊಂದಿಗೆ ಜಿ.ಪರಮೇಶ್ವರ್ ಚರ್ಚೆ