Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಿರ್ನಾಮ ಮಾಡಲು ಯಾರಿಂದಲು ಸಾಧ್ಯವಿಲ್ಲ: ರಮೇಶ್ ಜಾರಕಿಹೊಳಿ

ಕಾಂಗ್ರೆಸ್ ನಿರ್ನಾಮ ಮಾಡಲು ಯಾರಿಂದಲು ಸಾಧ್ಯವಿಲ್ಲ: ರಮೇಶ್ ಜಾರಕಿಹೊಳಿ
ಬೆಳಗಾವಿ , ಸೋಮವಾರ, 4 ಜುಲೈ 2016 (10:08 IST)
ದೇಶದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಜನರು ಬೆಂಬಲಿಸುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡುವುಯುದು ಖಚಿತ ಎಂದು ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
 
ಗೋಕಾಕನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ, ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಲು ಸಾಧ್ಯವಿಲ್ಲ. ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ನಿರಂತರವಾಗಿ ಶ್ರಮಿಸುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡುವುಯುದು ಖಚಿತ ಎಂದು ಹೇಳಿದ್ದಾರೆ.
 
ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಹಲವಾರು ಜನಪರ ಯೋಜನೆಗಳನ್ನು ರೂಪಿಸಿದೆ. ದೇಶದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಜನರು ಬೆಂಬಲಿಸುತ್ತಿದ್ದಾರೆ. ಕೋಮುವಾದದಿಂದ ಅಧಿಕಾರಕ್ಕೇರಲು ಹಂಬಲಿಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಬರುವುದು ಹಗಲುಗನಸಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 

Share this Story:

Follow Webdunia kannada

ಮುಂದಿನ ಸುದ್ದಿ

ಸಹೋದರನ ಸಾವಿನಿಂದ ಮನನೊಂದ ಯುವತಿ, ಬೆಂಕಿಗೆ ಹಾರಿ ಆತ್ಮಹತ್ಯೆ