Select Your Language

Notifications

webdunia
webdunia
webdunia
webdunia

ನನಗೆ ಮಂತ್ರಿ ಸ್ಥಾನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿ.ಪಿ.ಯೋಗೀಶ್ವರ್

ಸಿ.ಪಿ.ಯೋಗೀಶ್ವರ್
ಬೆಂಗಳೂರು: , ಭಾನುವಾರ, 19 ಜೂನ್ 2016 (11:28 IST)
ನನಗೆ ಮಂತ್ರಿ ಸ್ಥಾನ ದೊರೆಯುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಇಂಧನ ಸಚಿವ ಡಿಕೆ ಶಿವಕುಮಾರ್‌ನಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೀಶ್ವರ್ ಗುಡುಗಿದ್ದಾರೆ. 
 
ನನ್ನ ತಾಲೂಕು ಸೇರಿ ಅಕ್ಕ ಪಕ್ಕದ ತಾಲೂಕುಗಳಲ್ಲಿ ನನ್ನ ವರ್ಚಸ್ಸು ಹೆಚ್ಚಿದೆ. ನನ್ನ ತಮ್ಮ ತನ್ನ ಸ್ವಂತ ವರ್ಚಸ್ಸಿನಿಂದ ಜಿಪಂ ಅಧ್ಯಕ್ಷನಾಗಿದ್ದಾನೆಯೇ ಹೊರತು ಶಿವಕುಮಾರ್ ಬೆಂಬಲದಿಂದಲ್ಲ ಎಂದು ಪರೋಕ್ಷ ಟಾಂಗ್ ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ.ಯೋಗೀಶ್ವರ್,  ಪಕ್ಷದ ಹೈಕಮಾಂಡ್ ಎಂಪಿ ಚುನಾವಣೆ ಸಂದರ್ಭದಲ್ಲಿ ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿ ಹೋಗಿದೆ. ಹೈಕಮಾಂಡ್ ಏನು ಮಾಡುತ್ತದೆಯೋ ಕಾದು ನೋಡಬೇಕು ಎಂದು  ಹೇಳಿದ್ದಾರೆ.
 
ಬೇರೆಯವರ ಬೆಂಬಲದಿಂದ ನನಗೆ ಸಚಿವ ಸ್ಥಾನ ಬೇಕಾಗಿಲ್ಲ. ನನ್ನ ಕಾರ್ಯದಕ್ಷತೆ ಮತ್ತು ಸ್ವಕ್ಷೇತ್ರದಲ್ಲಿ ಜನಪ್ರಿಯತೆಯನ್ನು ಅಳೆದೆು ಸಚಿವ ಸ್ಥಾನ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕೋರಿದ್ದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಎಂ.ಕೃಷ್ಣಪ್ಪ ಬೆಂಬಲಿಗರಿಂದ ಭಾರಿ ಪ್ರತಿಭಟನೆ