Webdunia - Bharat's app for daily news and videos

Install App

ನನಗೆ ಮಂತ್ರಿ ಸ್ಥಾನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿ.ಪಿ.ಯೋಗೀಶ್ವರ್

Webdunia
ಭಾನುವಾರ, 19 ಜೂನ್ 2016 (11:28 IST)
ನನಗೆ ಮಂತ್ರಿ ಸ್ಥಾನ ದೊರೆಯುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಇಂಧನ ಸಚಿವ ಡಿಕೆ ಶಿವಕುಮಾರ್‌ನಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೀಶ್ವರ್ ಗುಡುಗಿದ್ದಾರೆ. 
 
ನನ್ನ ತಾಲೂಕು ಸೇರಿ ಅಕ್ಕ ಪಕ್ಕದ ತಾಲೂಕುಗಳಲ್ಲಿ ನನ್ನ ವರ್ಚಸ್ಸು ಹೆಚ್ಚಿದೆ. ನನ್ನ ತಮ್ಮ ತನ್ನ ಸ್ವಂತ ವರ್ಚಸ್ಸಿನಿಂದ ಜಿಪಂ ಅಧ್ಯಕ್ಷನಾಗಿದ್ದಾನೆಯೇ ಹೊರತು ಶಿವಕುಮಾರ್ ಬೆಂಬಲದಿಂದಲ್ಲ ಎಂದು ಪರೋಕ್ಷ ಟಾಂಗ್ ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ.ಯೋಗೀಶ್ವರ್,  ಪಕ್ಷದ ಹೈಕಮಾಂಡ್ ಎಂಪಿ ಚುನಾವಣೆ ಸಂದರ್ಭದಲ್ಲಿ ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿ ಹೋಗಿದೆ. ಹೈಕಮಾಂಡ್ ಏನು ಮಾಡುತ್ತದೆಯೋ ಕಾದು ನೋಡಬೇಕು ಎಂದು  ಹೇಳಿದ್ದಾರೆ.
 
ಬೇರೆಯವರ ಬೆಂಬಲದಿಂದ ನನಗೆ ಸಚಿವ ಸ್ಥಾನ ಬೇಕಾಗಿಲ್ಲ. ನನ್ನ ಕಾರ್ಯದಕ್ಷತೆ ಮತ್ತು ಸ್ವಕ್ಷೇತ್ರದಲ್ಲಿ ಜನಪ್ರಿಯತೆಯನ್ನು ಅಳೆದೆು ಸಚಿವ ಸ್ಥಾನ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕೋರಿದ್ದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments