ಪದಯಾತ್ರೆಗೆ ಯಾರು ಅಡಿಮಾಡೋಕಾಗಲಾ...!!!

Webdunia
ಭಾನುವಾರ, 9 ಜನವರಿ 2022 (14:46 IST)
ಉದಯಿಸುವ ಸೂರ್ಯ, ಹರಿಯುವ ನೀರನ್ನು ತಡೆಯಲಾಗಲ್ಲ. ಅದೇ ರೀತಿ ನಮ್ಮ ಪಾದಯಾತ್ರೆಯನ್ನು ತಡೆಯುವುದಕ್ಕೆ ಆಗಲ್ಲ. ಪಾದಯಾತ್ರೆಗೆ ನಮ್ಮ ತಾಲೂಕಿನಲ್ಲಿ ಎಲ್ಲರೂ ಬೆಂಬಲಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಮೇಕೆದಾಟು ಪಾದಯಾತ್ರೆಗೆ ಬರುವವರಿಗೆ ತೊಂದರೆ ನೀಡುತ್ತಿದ್ದಾರೆ. ಆದರೆ ನೀವು ಯಾರನ್ನೂ ತಡೆಯುವುದಕ್ಕೆ ಆಗಲ್ಲ. ಉದಯಿಸುವ ಸೂರ್ಯ, ಹರಿಯುವ ನೀರನ್ನು ತಡೆಯಲಾಗಲ್ಲ. ಅದೇ ರೀತಿ ನಮ್ಮ ಪಾದಯಾತ್ರೆಯನ್ನು ತಡೆಯುವುದಕ್ಕೆ ಆಗಲ್ಲ. ಪಾದಯಾತ್ರೆಗೆ ನಮ್ಮ ತಾಲೂಕಿನಲ್ಲಿ ಎಲ್ಲರೂ ಬೆಂಬಲಿಸುತ್ತಿದ್ದಾರೆ. ಆದರೆ ಕೆಲವರು ಪಾದಯಾತ್ರೆಗೆ ಹೋಗದಂತೆ ಕರೆ ಮಾಡಿ ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
 
ಎಲ್ಲರಿಗೂ ಪಾದಯಾತ್ರೆಗೆ ಬನ್ನಿ ಎಂದು ಆಹ್ವಾನ ನೀಡುತ್ತೇನೆ. ಪಾದಯಾತ್ರೆಗೆ ಬರಲು ನಾನು ಯಾರಿಗೂ ಬಲವಂತ ಮಾಡಲ್ಲ. ಪಾದಯಾತ್ರೆ ನಮ್ಮ ಕಾರ್ಯಕ್ರಮವಲ್ಲ, ನಿಮ್ಮ ಕಾರ್ಯಕ್ರಮ. ಯಾರು ಬೇಕಾದರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು. ಎಸ್‌ಪಿ, ಡಿಸಿ ಏನು ಮಾಡುತ್ತಾರೆ. ಹೆಚ್ಚು ಎಂದರೆ ಇವರು ಸಿದ್ದರಾಮಯ್ಯ ಮತ್ತು ನನ್ನ ಮೇಲೆ ಕೇಸ್ ಹಾಕಬಹುದು. ನಾನು ಫಿಲ್ಮ್ ಚೇಂಬರ್‌ಗೆ ಕೂಡ ಹೋಗಿ ಎಲ್ಲರನ್ನೂ ಆಹ್ವಾನಿಸಿದ್ದೇನೆ. ಯಾರು ಬರುತ್ತಾರೆಂದು ನನಗೆ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments