Webdunia - Bharat's app for daily news and videos

Install App

ಭಾರತ ರಷ್ಯಾದಿಂದ ತೈಲ ಖರೀದಿ ಮಾಡದಿರಲು ಯಾವ ದೇಶವು ಹೇಳಿಲ್ಲ

Webdunia
ಶನಿವಾರ, 8 ಅಕ್ಟೋಬರ್ 2022 (15:33 IST)
ಭಾರತ ಸರ್ಕಾರವು ದೇಶದ ಜನರಿಗೆ ಅಗತ್ಯವಾದ ತೈಲ ಉತ್ಪನ್ನಗಳನ್ನು ಒದಗಿಸುವ ನೈತಿಕ ಹೊಣೆಗಾರಿಕೆಯನ್ನು ಹೊಂದಿದೆ ಮತ್ತು ಅವುಗಳನ್ನು ಯಾವುದೇ ದೇಶದಿಂದ ಬೇಕಾದರೂ ಖರೀದಿಸುತ್ತದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.
ರಷ್ಯಾದಿಂದ ತೈಲ ಖರೀದಿಸಬೇಡಿ ಎಂದು ಭಾರತಕ್ಕೆ ಇದುವರೆಗೂ ಯಾವುದೇ ದೇಶ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
 
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವು ಕೆಲವು ತಿಂಗಳುಗಳಿಂದ ನಡೆಯುತ್ತಿದೆ ಮತ್ತು ಇದು ಪ್ರಪಂಚದಾದ್ಯಂತ ಇಂಧನ ಆಮದಿನ ಮೇಲೆ ಪರಿಣಾಮ ಬೀರಿದೆ. ಈ ನಡುವೆ ರಷ್ಯಾ ಮೇಲೆ ನಿರ್ಬಂಧ ಹೇರಿದ್ದರೂ ಭಾರತ ಅದನ್ನು ಕಡೆಗಣಿಸಿ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸಿದೆ ಎಂದು ಟೀಕಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹರ್ದೀಪ್ ಸಿಂಗ್ ಪುರಿ ಮಾತನಾಡಿದರು. ಅಷ್ಟೇ ಅಲ್ಲದೆ ಭಾರತ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವುದರಿಂದ ಬರುತ್ತಿರುವ ಟೀಕೆಗಳನ್ನು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಕೂಡ ತಳ್ಳಿ ಹಾಕಿದ್ದಾರೆ.
 
ರಷ್ಯಾ ಮೇಲೆ ನಿರ್ಬಂಧ ಹೇರಿರುವ ಹಿನ್ನಲೆಯಲ್ಲಿ ಆ ದೇಶದಿಂದ ತೈಲ ಖರೀದಿಸಬೇಡಿ ಎಂದು ಯುರೋಪ್ ಭಾರತಕ್ಕೆ ಸೂಚಿಸಿದೆ ಎನ್ನಲಾಗಿದೆ. ಆದರೆ, ನಿರ್ಬಂಧವಿದ್ದರೂ ಯುರೋಪ್ ರಷ್ಯಾದಿಂದ ಗ್ಯಾಸ್ ಆಮದು ಮಾಡಿಕೊಳ್ಳುವುದು ಸರಿಯೇ? ಎಂದು ಹರ್ದಿಪ್‌ ಸಿಂಗ್‌ ಪುರಿ ಪ್ರಶ್ನಿಸಿದರು. ಯುರೋಪ್ ರಷ್ಯಾದಿಂದ ಗ್ಯಾಸ್ ಖರೀದಿಸಿದರೆ ಅದು ಯುದ್ಧಕ್ಕೆ ಧನಸಹಾಯ ಮಾಡಿದಂತೆ ಅಲ್ಲವೇ? ಭಾರತ ತೈಲ ಖರೀದಿಸಿದರೆ ಮಾತ್ರ ರಷ್ಯಾಕ್ಕೆ ಯುದ್ಧಕ್ಕೆ ಹಣ ಕೊಟ್ಟಂತೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments