Webdunia - Bharat's app for daily news and videos

Install App

ದೇವೇಗೌಡರಿಗೆ ಕಣ್ಣೀರು ಹಾಕಿಸಿದವರು ಯಾರೂ ಉದ್ಧಾರವಾಗಲ್ಲ: ಸಿಎಂ ವಿರುದ್ಧ ಗುಡುಗಿದ ಕುಮಾರಸ್ವಾಮಿ

Sampriya
ಶನಿವಾರ, 28 ಸೆಪ್ಟಂಬರ್ 2024 (16:18 IST)
ಬೆಂಗಳೂರು: ಸಿದ್ದರಾಮಯ್ಯ ಅವರು ಇದೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಎಂದು ಹೇಳುತ್ತಿದ್ದಾರೆ. ಆದರೆ ಅವರು ವಿರುದ್ದ ಲೋಕಾಯುಕ್ತದಲ್ಲಿ 50ಪ್ರಕರಣಗಳು ದಾಖಲಾಗಿವೆ. ಅವೆಲ್ಲ ತನಿಖೆ ಹಂತದಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗುವುದರಲ್ಲಿ ಸಂಶಯವಿಲ್ಲ. ಅದರಿಂದ ರಾಜ್ಯ ಸರ್ಕಾರದಲ್ಲಿ ಈ ಬೆಳವಣಿಗೆ ನಡೆಯುತ್ತಿದೆ ಎಂದು  ಸಿದ್ದರಾಮಯ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಶಾಪ ಹಾಕಿದರು.

ಇದೀಗ ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು.

ಕರ್ನಾಟಕದಲ್ಲಿ ರಾಜಕಾರಣದಲ್ಲಿ ಈ ರೀತಿಯ ಬಿಸಿ ಈ ಹಿಂದೆಂದೂ ನೋಡಿರಲಿಲ್ಲ. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದ್ಮೇಲೆ ಆಡಳಿತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಹೊಸ ರೀತಿಯ ಕಾರ್ಯವೈಖರಿ ಪ್ರಾರಂಭ ಮಾಡಿದೆ ಈ ಸರ್ಕಾರ.  ಇದು ಮುಂದೆ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂದು ಕಾಲವೇ ನಿರ್ಣಯ ಮಾಡಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments