Webdunia - Bharat's app for daily news and videos

Install App

ಕೈಯಲ್ಲಿ ಗುದ್ದಲಿ ಹಿಡಿದು ಓಡಾಡಿದರೆ ಜನ ಮತ ಹಾಕ್ತಾರೇನ್ರಿ?: ಸಿಎಂಗೆ ಪ್ರಸಾದ್ ತಿರುಗೇಟು

Webdunia
ಸೋಮವಾರ, 26 ಡಿಸೆಂಬರ್ 2016 (14:27 IST)
ನಂಜನಗೂಡಿನ ಮೇಲೆ ಸಿಎಂ ಹಾಗೂ ಸಚಿವರ ಧೃತರಾಷ್ಟ್ರ ಆಲಿಂಗನ. ಕೈಯಲ್ಲಿ ಗುದ್ದಲಿ ಹಿಡಿದು ಓಡಾಡಿದರೆ ಜನ ಮತ ಹಾಕ್ತಾರೇನ್ರಿ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಕೂಡಿನ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸ್ಪಂಧಿಸುತ್ತಿಲ್ಲ. ಹೀಗಾಗಿ ಅವರಿಗೆ ನಂಜನಕೂಡಿನ ಮೇಲೆ ತುಂಬಾ ಕೋಪ ಎಂದು ದೂರಿದರು. 
 
ರಾಜ್ಯ ಕಾಂಗ್ರೆಸ್ ನಾಯಕರು ನೈತಿಕವಾಗಿ ದಿವಾಳಿಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹತಾಶರಾಗಿದ್ದಾರೆ ಎಂದು ಲೇವಡಿ ಮಾಡಿದರು. 
 
ನಂಜನಗೂಡು ಉಪಾಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಳಿ ಅಭ್ಯರ್ಥಿಯೇ ಇಲ್ಲ. ಜಾಮೀನಿನ ಮೇಲೆ ಹೊರಗಿರುವವರಿಗೆ ಟಿಕೆಟ್ ನೀಡಲು ಸಿಎಂ ಸಿದ್ದರಾಮಯ್ಯ ಓಡಾಡುತ್ತಿದ್ದಾರೆ ಎಂದು ಸಚಿವ ಮಹದೇವಪ್ಪ ಹಾಗೂ ಅವರ ಪುತ್ರ ಸುನೀಲ್ ಭೋಸ್‌ಗೆ ಟಾಂಗ್ ನೀಡಿದ್ದಾರೆ. 
 
ವಿಶ್ವಗುರು ಬಸವಣ್ಣ ಹಾಗೂ ಡಾ. ಅಂಬೇಡ್ಕರ್ ತತ್ವಗಳನ್ನು ಗಾಳಿಗೆ ತೂರಿ ಬಿಜೆಪಿ ಸೇರುತ್ತಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯರ ಹೇಳಿಕೆಗೆ ನಾಳೆ ತಕ್ಕ ಉತ್ತರ ನೀಡುತ್ತೇನೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ತಿರುಗೇಟು ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments