ಕರ್ನಾಟಕ ಸರ್ಕಾರ ಕೈಗೊಂಡಿರುವ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಕೇಂದ್ರ ಪರಿಸರ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಇಂದು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಇಲ್ಲಿಯವರೆಗೂ ಕೂಡ ಯಾವುದೇ ರೀತಿಯ ಮನವಿ ಪತ್ರವನ್ನು ರವಾನಿಸಿಲ್ಲ. ಅಲ್ಲದೆ ಕೇಂದ್ರ ಸರ್ಕಾರವೂ ಕೂಡ ಈ ಸಂಬಂಧ ಅನುಮತಿ ನೀಡಿಲ್ಲ ಎಂದರು.
ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಅನುಧಾನ ಹಂಚಿಕೆ ಬಗ್ಗೆ ಒಡಂಬಡಿಕೆಯಾಗಿಲ್ಲ. ಅಷ್ಟೇ ಅಲ್ಲದೆ ಯೋಜನೆಗಾಗಿ ರಾಜ್ಯ ಸರ್ಕಾರ 25 ಕೋಟಿ ರೂ. ಅನುದಾನ ಮೀಸಲಿಟ್ಟಿದೆ ಎನ್ನಲಾಗುತ್ತಿದೆಯಾದರೂ ಆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.