Webdunia - Bharat's app for daily news and videos

Install App

ಈದ್ಗಾ ಮೈದಾನದಲ್ಲಿ ಹಬ್ಬ ಆಚರಿಸಲ್ಲು ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ..!!!

Webdunia
ಗುರುವಾರ, 14 ಜುಲೈ 2022 (16:58 IST)
ಬಿಬಿಎಂಪಿ ಆಟದ ಮೈದಾನದಲ್ಲಿ ಹಬ್ಬಗಳನ್ನು ಆಚರಣೆ ಮಾಡಲೂ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆ ಈದ್ಗಾ ಮೈದಾನ ಆಟದ ಮೈದಾನದವಾಗಿಯೇ ಇರುತ್ತದೆ.
ಬಿಬಿಎಂಪಿ ಆಟದ ಮೈದಾನ. ಇಲ್ಲಿ ಹಬ್ಬಗಳ ಆಚರಣೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ ಎಂದು ಹೇಳಿದರು. ಸ್ವಾತಂತ್ರ್ಯ ಬಂದು‌ 75 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ಅದೇ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸಲಿದ್ದೇವೆ.
 
ಒಂದು ವೇಳೆ ರಾಷ್ಟ್ರ ಧ್ವಜ ಹಾರಿಸಲು ಅವಕಾಶ ಕೊಡದಿದ್ದರೆ ಅದು ದೇಶಕ್ಕೆ ಮಾಡಿದ ಅವಮಾನವಾಗುತ್ತದೆ. ಆಗಸ್ಟ್ 15ರಂದು ರಾಷ್ಟ್ರಧ್ವಜ ಹಾರಿಸಲು ಅನುಮತಿ‌ ಕೊಡಲೇಬೇಕು ಎಂದು ತಿಳಿಸಿದರು.
 
ಇನ್ನೂ ಕನ್ನಡ ರಾಜ್ಯೋತ್ಸವ, ಅಂಬೇಡ್ಕರ್ ಜಯಂತಿ, ಗಣೇಶ ಉತ್ಸವ ಮಾಡಲು ಅವಕಾಶ ಕೋರಿ ಮನವಿ ಸಲ್ಲಿಸಲಾಗಿದೆ. ಇದು ಬಿಬಿಎಂಪಿ ಆಟದ ಮೈದಾನವಾಗಿರುವುದರಿಂದ ಅದಕ್ಕೆ 'ಜಯಚಾಮರಾಜೇಂದ್ರ ಆಟದ ಮೈದಾನ' ಎಂಬ ಹೆಸರಿಡಲು ನಾನು ಆಗ್ರಹಿಸಿದ್ದೇನೆ. ಇಲ್ಲಿ ಯಾರೂ ದೇಶ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ. ಹೀಗಾಗಿ ನಮಗೂ ಹಬ್ಬದ ಆಚರಣೆಗೆ ಅವಕಾಶ ಕೊಡಬೇಕು ಎಂದು ಒತ್ತಾಯ ಮಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments