Webdunia - Bharat's app for daily news and videos

Install App

ಪಾದಚಾರಿಗಳಿಗೆ ಬೆಂಗಳೂರಲ್ಲಿ ಓಡಾಡಲು ಅವಕಾಶವಿಲ್ಲವೇ?

Webdunia
ಬುಧವಾರ, 18 ಜನವರಿ 2023 (16:40 IST)
WD
ಫುಟ್ ಪಾತ್ ಗಳಲ್ಲಿ, ಖಾಲಿ ಜಾಗ ಸಿಕ್ಕಲ್ಲಿ ಬೆಂಗಳೂರಲ್ಲಿ ಕಸ ಎಸೆಯುವುದು ಸಾಮಾನ್ಯವಾಗಿದೆ. ಬಹುತೇಕ ಕಡೆಗಳಲ್ಲಿ ಈ ಸಮಸ್ಯೆಯಿದೆ. ಇಲ್ಲಿರುವ ಫೋಟೋಗಳು ದ್ವಾರಕಾನಗರ, ಹೊಸಕೆರೆಹಳ್ಳಿ, ಬನಶಂಕರಿ ಮೂರನೇ ಹಂತದ್ದು. ಇಲ್ಲಿ ಕಳೆದ ಒಂದು ತಿಂಗಳಿನಿಂದ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದೆ. ಅದರ ಕಸವನ್ನು ಅಲ್ಲೇ ಫುಟ್ ಪಾತ್ ಮೇಲೆ ಎಸೆಯಲಾಗಿದೆ.

WD
 
ಇದರ ಜೊತೆಗೇ ಸಾರ್ವಜನಿಕರೂ ಇದೇ ಸ್ಥಳದಲ್ಲಿ ಕಸ ತಂದು ಸುರಿಯುತ್ತಿದ್ದಾರೆ. ಹೇಳಿ, ಕೇಳಿ ಇದು ಔಟರ್ ರಿಂಗ್ ರೋಡ್. ಸದಾ ವಾಹನಗಳಿಂದ ಗಿಜಿಗುಡುವ ರಸ್ತೆ. ಇಲ್ಲೇ ಪಕ್ಕದಲ್ಲಿ ಪ್ರತಿಷ್ಠಿತ ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಇದೆ. ಕಾಲೇಜಿಗೆ ನಿತ್ಯ ಓಡಾಡುವ ವಿದ್ಯಾರ್ಥಿಗಳು, ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರು ಈ ಕಸದ ರಾಶಿಯನ್ನು ದಾಟಿ ಮುಂದೆ ಸಾಗಬೇಕು.  ಸದಾ ವಾಹನಗಳು ಓಡಾಡುವ ಕಾರಣ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲು ಕಾದು ಜೀವ ಕೈಯಲ್ಲಿ ಹಿಡಿದುಕೊಂಡೇ ರಸ್ತೆಗಿಳಿದು ಮುಂದೆ ಹೋಗಬೇಕು. ಇದು ಅಪಾಯಕಾರಿಯಾಗಿದ್ದು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಇದನ್ನು ತೆರವುಗೊಳಿಸಲು ಸಾರ್ವಜನಿಕರು ಫುಟ್ ಪಾತ್ ಮೇಲೆ ಸುರಕ್ಷಿತವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು. ಇಲ್ಲದೇ ಹೋದರೆ ಅನಾಹುತ ತಪ್ಪಿದ್ದಲ್ಲ.
WD

  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments