ಕಾಲಿಗೆ ಬೀಳುವುದು ವಿಕೃತಿ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿರಾಕರಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ಕಾಲಿಗೆ ಬಿದ್ದಿರುವುದು ಸರಿಯಲ್ಲ. ಅದು ನಮ್ಮ ಸಂಸ್ಕ್ರತಿಯಲ್ಲ ವಿಕೃತಿ ಎಂದು ಆನೇಕಲ್ನಲ್ಲಿ ಈಶ್ವರಪ್ಪ ಹೇಳಿಕೆ ನೀಡಿದ್ದರು.
ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಜಟಾಪಟಿ ಅಂತ್ಯವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಪದಾಧಿಕಾರಿಗಳ ನೇಮಕ ಸೇರಿದಂತೆ ಹಲವು ವಿಷಯಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ಮುಂದುವರಿದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.