ಗಡಿ ಭಾಗಗಳಲ್ಲಿ ಸೇಫ್ಟಿ ಇಲ್ಲಾ

Webdunia
ಬುಧವಾರ, 16 ಮಾರ್ಚ್ 2022 (18:27 IST)
ರಾಜ್ಯ ವಿಧಾನ ಪರಿಷತ್ ನಲ್ಲಿಂದು ಬಜೆಟ್ ಚರ್ಚೆ ವೇಳೆ ಜೆಡಿಎಸ್ ಸದಸ್ಯ ಬಿ ಎಂ ಫಾರೂಖ್ ಅವರು ಕರಾವಳಿಯ ಬಗ್ಗೆ ಧ್ವನಿ ಎತ್ತಿ ಮಾತನಾಡಿದರು. ರಷ್ಯಾ ಮತ್ತು ಉಕ್ರೇನ್ ಮಧ್ಯೆ ಯುದ್ಧ ಆಗ್ತಿದೆ. ಕರ್ನಾಟಕದ ಮೂರು ಜಿಲ್ಲೆಗಳು ಸಮುದ್ರದ ಗಡಿಯನ್ನು ಹಂಚಿಕೊಳ್ಳುತ್ತವೆ.
ರಾಜ್ಯ ವಿಧಾನ ಪರಿಷತ್ ನಲ್ಲಿಂದು ಬಜೆಟ್ ಚರ್ಚೆ ವೇಳೆ ಜೆಡಿಎಸ್ ಸದಸ್ಯ ಬಿ ಎಂ ಫಾರೂಖ್ ಅವರು (JDS MLC BM Farooq) ಕರಾವಳಿಯ ಬಗ್ಗೆ ಧ್ವನಿ ಎತ್ತಿ ಮಾತನಾಡಿದರು. ರಷ್ಯಾ ಮತ್ತು ಉಕ್ರೇನ್ ಮಧ್ಯೆ ಯುದ್ಧ ಆಗ್ತಿದೆ (Russian Ukraine War). ಕರ್ನಾಟಕದ ಮೂರು ಜಿಲ್ಲೆಗಳು (Coastal Karnataka) ಸಮುದ್ರದ ಗಡಿಯನ್ನು ಹಂಚಿಕೊಳ್ಳುತ್ತವೆ. ಆ ಕಡೆಯಿಂದ ಮಿಸೈಲ್ ಏನಾದ್ರೂ ಹೊಡೆದ್ರೆ ಬೆಂಕಿ ನಂದಿಸಲು ಸರಿಯಾದ ಫೈರ್ ಸೇಫ್ಟಿ ವ್ಯವಸ್ಥೆ ಇಲ್ಲಿಲ್ಲ (Fire Extinguisher) ಎಂದು ಆತಂಕ ವ್ಯಕ್ತಪಡಿಸಿದರು.
 
ಅದೇ ರೀತಿ ಮಂಗಳೂರು ಏರ್ಪೋರ್ಟ್ ನಲ್ಲೂ ಸರಿಯಾದ ವ್ಯವಸ್ಥೆ ಇಲ್ಲ. ಮುಂಬೈ ಹೊರತು ಪಡಿಸಿ ಉಳಿದ ಥಾಣಾ ಮುಂತಾದ ಪ್ರದೇಶ ಅಭಿವೃದ್ಧಿಗೊಳಿಸಲಾಗುತ್ತಿದೆ. ಆದ್ರೆ ಬೆಂಗಳೂರು ಹೊರತು ಪಡಿಸಿ ಕರಾವಳಿಯಲ್ಲಿ ಡಾಟಾ ಸೆಂಟರ್ ಮಾಡಿ ಎಂದು ಆಗ್ರಹಿಸಿದ ಅವರು ಇಲ್ಲಿ ಸಾಕಷ್ಟು ಪರಿಣಿತರಿದ್ದಾರೆ. ಅವರುಗಳ ಸೇವೆ ಪಡೆಯಿರಿ. ಪ್ರತಿ ಬಾರಿ ಕಡಲ್ಕೊರತೆ ತಡೆಗೆ ಸಮುದ್ರ ಕಲ್ಲು ಹಾಕಿ ಸಾವಿರಾರು ಕೋಟಿ ರೂಪಾಯಿ ಹಣ ವೇಸ್ಟ್ ಮಾಡ್ತೀರಿ. ವಿದೇಶದಲ್ಲೆಲ್ಲ ನಡುಗಡ್ಡೆ ರೀತಿಯಲ್ಲಿ ಸಮುದ್ರ ತೀರದಲ್ಲಿ ವೈಜ್ಞಾನಿಕವಾಗಿ ತಡೆಯಲಾಗುತ್ತಿದೆ. ಸಮುದ್ರ ತೀರದುದ್ದಕ್ಕೂ ಗಾರ್ಡನ್ ಮಾಡಲಾಗುತ್ತಿದೆ. ನೀವು ಅಲ್ಲಿಗೆ ಪ್ರವಾಸ ಮಾಡಿ ಬಂದು, ಆ ತಂತ್ರಜ್ಞಾನವನ್ನು ತಂದು ಇಲ್ಲೂ ಅಳವಡಿಸಿ ಎಂದು ಜೆಡಿಎಸ್ ಮೇಲ್ಮನೆ ಸದಸ್ಯ ಫಾರೂಖ್ ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments