Select Your Language

Notifications

webdunia
webdunia
webdunia
webdunia

ಕೊರೋನಾ ಭಯವಿಲ್ಲ, ಹಬ್ಬದ ಖರೀದಿಗೆ ಮುಗಿಬಿದ್ದ ಜನ

ಕೊರೋನಾ ಭಯವಿಲ್ಲ, ಹಬ್ಬದ ಖರೀದಿಗೆ ಮುಗಿಬಿದ್ದ ಜನ
ಬೆಂಗಳೂರು , ಶುಕ್ರವಾರ, 20 ಆಗಸ್ಟ್ 2021 (08:51 IST)
ಬೆಂಗಳೂರು: ಇಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತಿದ್ದು, ಕೊರೋನಾದ ಭಯವಿಲ್ಲದೇ ಜನ ಖರೀದಿಯಲ್ಲಿ ತೊಡಗಿರುವ ದೃಶ್ಯ ಕಂಡುಬಂದಿದೆ.


ಬೆಂಗಳೂರು ಸೇರಿದಂತೆ ಎಲ್ಲೆಡೆ ಮಾರುಕಟ್ಟೆಗಳಲ್ಲಿ ಜನ ಸಾಗರವೇ ಕಂಡುಬಂದಿದೆ. ಹೂವು, ಹಣ್ಣು ಖರೀದಿಗಾಗಿ ಜನ ಮುಗಿಬೀಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಸರ್ಕಾರ ಎಷ್ಟೇ ನಿಯಮಗಳನ್ನು ತಂದರೂ ಜನ ಮಾತ್ರ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೇ ಈ ರೀತಿ ಅಪಾಯ ತಂದೊಡ್ಡುತ್ತಿರುವುದು ವಿಪರ್ಯಾಸ. ದೇವಾಲಯಗಳಲ್ಲಿ ಜನರಿಗೆ ದೇವರ ದರ್ಶನಕ್ಕೆ ನಿರ್ಬಂಧವಿದ್ದರೂ ಮನೆಗಳಲ್ಲೇ ಭರ್ಜರಿಯಾಗಿ ಹಬ್ಬ  ಆಚರಿಸಲು ಜನ ತಯಾರಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವರಮಹಾಲಕ್ಷ್ಮೀ ಹಬ್ಬಕ್ಕೆ ಶುಭ ವಾರ್ತೆ; ಚಿನ್ನ ಬೆಳ್ಳಿ ದರ ಇಳಿಕೆ