Webdunia - Bharat's app for daily news and videos

Install App

ದಂದೂರು ಲಾಂಚ್ ನೌಕರರಿಗೆ ವರ್ಷದಿಂದ ವೇತನವಿಲ್ಲ ಬಡಪಾಯಿ ನೌಕರರ ಮೇಲೆ ಅಧಿಕಾರಿಗಳ ಜಬರ್ದಸ್ತ್

Webdunia
ಮಂಗಳವಾರ, 13 ಸೆಪ್ಟಂಬರ್ 2022 (17:18 IST)
ಸಾವಿರಾರು ಪ್ರವಾಸಿಗರು, ವಿದ್ಯಾರ್ಥಿಗಳು, ಸ್ಥಳೀಯರನ್ನು ಸುರಕ್ಷಿತವಾಗಿ ದಡ ಸೇರಿಸುವ 'ಅಂಬಿಗ'ರಾಗಿ ಕಾರ್ಯ ನಿರ್ವಹಿಸುವ ಸಿಗಂದೂರು ಲಾಂಚ್‌ನ ಅರೆಕಾಲಿಕ ನೌಕರರು ವೇತನ ಇಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯು ಈ ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು, ಅವರ ಬದುಕು ದುಸ್ತರವಾಗಲು ಕಾರಣವಾಗಿದೆ.
 
ತಾಲ್ಲೂಕು ಕೇಂದ್ರದಿಂದ 30 ಕಿ.ಮೀ. ದೂರದಲ್ಲಿರುವ ಸಿಗಂದೂರು, ಹಲ್ಕೆ-ಮುಪ್ಪಾನೆ, ನಿಟ್ಟೂರು ಬಳಿಯ ಹಸಿರುಮಕ್ಕಿ ಪ್ರದೇಶದ ಕಡವು ಕೇಂದ್ರಗಳ ಬಳಿ ಸೇರಿದಂತೆ ಒಟ್ಟು 7 ಲಾಂಚ್‌ಗಳಿವೆ. ಈ ಕಡವಿನಲ್ಲಿ (ಲಾಂಚ್) ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಸಿಬ್ಬಂದಿ ಸೇರಿ 19 ಮಂದಿ ನೌಕರರಿಗೆ ಒಂದು ವರ್ಷದಿಂದ ವೇತನ ನೀಡದೆ ಅಧಿಕಾರಿಗಳು ಶೋಷಿಸುತ್ತಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ನೌಕರರು ಹೊರಗಿನವರೊಂದಿಗೆ ಚರ್ಚಿಸಬಾರದು. ಈ ವಿಚಾರದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದರೆ ಕರ್ತವ್ಯ ಲೋಪದ ಹಣೆಪಟ್ಟಿ ಕಟ್ಟಿ ಕೆಲಸದಿಂದ ಕಿತ್ತು ಹಾಕಲಾಗುವುದು ಎಂದು ಬೆದರಿಕೆಯೊಡ್ಡಲಾಗಿದೆ' ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ನೌಕರರೊಬ್ಬರು 'ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments