Select Your Language

Notifications

webdunia
webdunia
webdunia
webdunia

ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ : ಆಕಾಂಕ್ಷಿಗಳಲ್ಲಿ ಹೈಟೆನ್ಶನ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ : ಆಕಾಂಕ್ಷಿಗಳಲ್ಲಿ ಹೈಟೆನ್ಶನ್
ವಿಜಯಪುರ , ಭಾನುವಾರ, 26 ಜುಲೈ 2020 (18:14 IST)
ವಿಧಾನ ಪರಿಷತ್ ಸ್ಥಾನಗಳಿಗೆ ಸರಕಾರ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದ ಬಳಿಕ ಇದೀಗ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಗರಿಗೆದರಿದೆ.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಸಚಿವ ಸಂಪುಟದಲ್ಲಿ ಯಾವುದೇ ವಿಚಾರ ಚರ್ಚೆಯಾಗಿಲ್ಲ. ಇದೆಲ್ಲ ಗಾಳಿ ಸುದ್ದಿ, ಮಾಧ್ಯಮಗಳ ಸೃಷ್ಠಿ ಮಾತ್ರ ಎಂದು ಉಪಮುಖ್ಯಮಂತ್ರಿ ಗೋವಿಂದ‌ ಕಾರಜೋಳ ಹೇಳಿದ್ದಾರೆ.

ತಮ್ಮ ತಮ್ಮ ಅನುಕೂಲಕ್ಕೆ ತಕ್ಕ ಹಾಗೆ ಮಾಧ್ಯಮಗಳು ವರದಿ ಮಾಡುತ್ತಿವೆ. ಸಂಪುಟ ವಿಸ್ತರಣೆ ಸಧ್ಯಕ್ಕೆ ಇಲ್ಲ ಎಂದರು.
ಇನ್ನು ರಾಜ್ಯ ಬಿಜೆಪಿ ಸರಕಾರ  ಸಂಕಷ್ಟದ ಮಧ್ಯೆಯೂ ಒಂದು ವರ್ಷ ಪೂರೈಸಿದೆ. ಮುಖ್ಯಮಂತ್ರಿ ಬಿ. ಎಸ್.  ಯಡಿಯೂರಪ್ಪ ಯಶಸ್ವಿಯಾಗಿ ರಾಜ್ಯವನ್ನು ಮುನ್ನಡೆಸಿದ್ದಾರೆ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಂದು ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಚಾಲನೆ