Webdunia - Bharat's app for daily news and videos

Install App

ಟ್ಯಾಕ್ಸ್ ಕಟ್ಟೋರು ಯಾರೂ ಗೃಹಲಕ್ಷ್ಮಿ ಬೇಕು ಅಂತ ಕೇಳ್ತಿಲ್ಲ: ಶಿವಕುಮಾರ್

Webdunia
ಬುಧವಾರ, 7 ಜೂನ್ 2023 (14:56 IST)
ಬೆಂಗಳೂರು : ತೆರಿಗೆ ಪಾವತಿ ಮಾಡುವವರು ಯಾರೂ ನಮಗೆ ಗೃಹಲಕ್ಷ್ಮಿ ಬೇಕು ಅಂತ ಕೇಳುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಗೃಹಲಕ್ಷ್ಮಿಗೆ ಕಂಡಿಷನ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಾವು ಸರ್ಕಾರ ನಾವು ತೀರ್ಮಾನ ಮಾಡುವುದಾಗಿ ಹೊಸ ವರಸೆ ತೆಗೆದರು.

ಒಬ್ಬರಿಗೆ ಒಂದು ರೂಪಾಯಿ ಕೊಡಬೇಕಾದ್ರೆ ಅಕೌಂಟ್ ಇರಬೇಕು. ವೋಟರ್ ಐಡಿ, ಆಧಾರ್ ಕಾರ್ಡ್ ಇರಬೇಕು. ಅವರದ್ದೇ ಬ್ಯಾಂಕ್ ಅಕೌಂಟ್ ಇರಬೇಕು. ನಮ್ಮ ಬಳಿ ಎಲ್ಲಾ ದಾಖಲೆ ಇದೆ. ಮನೆ ಯಜಮಾನಿ ಅವರೇ ತೀರ್ಮಾನ ಮಾಡಬೇಕು. ಟ್ಯಾಕ್ಸ್ ಕೊಟ್ಟೋರು ಯಾರೂ ಗೃಹಲಕ್ಷ್ಮಿ ಬೇಕು ಅಂತ ಕೇಳ್ತಿಲ್ಲ. ನನಗೆ ಅನೇಕ ಜನ ಪತ್ರ ಬರೆದಿದ್ದಾರೆ. ಅದೆಲ್ಲವನ್ನೂ ಹೇಳೋಕೆ ಆಗುತ್ತಾ? ಟ್ಯಾಕ್ಸ್ ಕಟ್ಟೋರು ಯಾರೂ ಬಂದು ಕೇಳಲ್ಲ ಎಂದರು.

ಮನೆ, ಸಂಸಾರ ಯಾರು ನಡೆಸುತ್ತಾರೆ ಅಂತ ಅವರ ಹೇಳಬೇಕು. ಅವರ ಮನೆ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ. ಒಂದು ಮನೆಗೆ ಒಂದು. ವೋಟರ್ ಲಿಸ್ಟ್ ನಲ್ಲಿ ಯಾರ ಮನೆ ಇದೆ ಅನ್ನೋ ಲೆಕ್ಕ ಇದೆ. ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಎಲ್ಲಾ ಲೆಕ್ಕ ಇದೆ. ಫಸ್ಟ್ ನೇಮ್ ಕೊಡಬೇಕಾ, ಸೆಕೆಂಡ್ ನೇಮ್ ಕೋಡಬೇಕಾ? ಹೆಣ್ಣುಮಕ್ಕಳು ತೀರ್ಮಾನ ಮಾಡಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments