Publish Date: Mon, 23 Apr 2018 (18:31 IST)
Updated Date: Mon, 23 Apr 2018 (18:33 IST)
ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರನನ್ನು ಸಿಎಂ ಸಿದ್ದರಾಮಯ್ಯ ಪುತ್ರನ ಎದುರು ಕಣಕ್ಕಿಳಿಸಿ ಜಿದ್ದಾಜಿದ್ದಿನ ಕಣವಾಗಿಸುವ ಕನಸಿನಲ್ಲಿದ್ದ ಬಿಎಸ್ ಯಡಿಯೂರಪ್ಪನವರಿಗೆ ಹೈಕಮಾಂಡ್ ಶಾಕ್ ಕೊಟ್ಟಿದೆ.
ಸ್ವತಃ ಯಡಿಯೂರಪ್ಪನವರಿಗೆ ಕರೆ ಮಾಡಿದ ಬಿಜೆಪಿ ಹೈಕಮಾಂಡ್ ವಿಜಯೇಂದ್ರಗೆ ಟಿಕೆಟ್ ಇಲ್ಲ ಎಂಬ ವಿಚಾರವನ್ನು ತಿಳಿಸಿದೆ. ಇದೀಗ ಮೈಸೂರಿನಲ್ಲಿ ಭಾರೀ ಆಕ್ರೋಶಕ್ಕೆ ವ್ಯಕ್ತವಾಗಿದೆ. ಇನ್ನೊಂದು ಮೂಲದ ಪ್ರಕಾರ ವಿಜಯೇಂದ್ರ ಬಿ ಫಾರಂ ಇಲ್ಲದೇ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ.
ಮೈಸೂರಿಗೆ ಒಲ್ಲದ ಮನಸ್ಸಿನಿಂದಲೇ ತೆರಳಿರುವ ಯಡಿಯೂರಪ್ಪನವರ ಭೇಟಿಗೆ ಬಂದ ಬಿಜೆಪಿ ನಾಯಕ ಎಸ್ ಎ ರಾಮದಾಸ್ ಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಪ್ರಸಂಗವೂ ನಡೆಯಿತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.