Webdunia - Bharat's app for daily news and videos

Install App

ಬೆಂಗಳೂರಿನ ಈ ಪಾರ್ಕ್ ನಲ್ಲಿ ನಡೆಯುವಂತಿಲ್ಲ, ವಾಕಿಂಗ್ ಮಾಡುವಂತಿಲ್ಲ, ಹಾಗಿದ್ದರೆ ಈ ಪಾರ್ಕ್​ನಲ್ಲಿ ಏನು ಮಾಡಬೇಕು?

Webdunia
ಗುರುವಾರ, 14 ಜುಲೈ 2022 (14:46 IST)
ಬೆಂಗಳೂರಿನ ಈ ಪಾರ್ಕ್​ನಲ್ಲಿ ಯಾರೂ ಜಾಗಿಂಗ್, ವಾಕಿಂಗ್ ಮಾಡುವಂತಿಲ್ಲ, ಬಲದಿಂದ ಎಡಕ್ಕೆ ಯಾರೂ ನಡೆಯುವಂತಿಲ್ಲ ಎಂದು ಬಿಬಿಎಂಪಿ ದೊಡ್ಡ ಬೋರ್ಡ್​ ಹಾಕಿದೆ. ಇದರ ಫೋಟೋ ಈಗ ವೈರಲ್ ಆಗಿದೆ.
ಬೆಂಗಳೂರು: ಬೆಂಗಳೂರು ಉದ್ಯಾನನಗರಿ ಎಂಬ ಹೆಗ್ಗಳಿಕೆ ಪಡೆದಿರುವ ನಗರ.
ಪ್ರತಿ ಏರಿಯಾಗೂ ನಾಲ್ಕೈದು ಪಾರ್ಕ್​ಗಳಿರುತ್ತವೆ. ಸಾಮಾನ್ಯವಾಗಿ ಭಾರತದ ಸಾರ್ವಜನಿಕ ಪಾರ್ಕ್​ಗಳಲ್ಲಿ ಜನರಿಗೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಅವರಿಗಾಗಿ ಸಮಯವನ್ನೂ ನಿಗದಿ ಮಾಡಲಾಗುತ್ತದೆ. ಬೆಳಗಿನ ವೇಳೆ ಜಾಗಿಂಗ್, ವಾಕಿಂಗ್ ಮಾಡುವವರಿಗೆ ಮತ್ತು ಸಂಜೆಯ ವೇಳೆ ವಾಕಿಂಗ್ ಮಾಡುವವರಿಗೆ ಪಾರ್ಕ್​ಗಳ ಗೇಟ್ ಓಪನ್ ಮಾಡಲಾಗುತ್ತದೆ. ಆದರೆ, ಬೆಂಗಳೂರಿನ ಈ ಪಾರ್ಕ್​ನಲ್ಲಿ ಯಾರೂ ಜಾಗಿಂಗ್, ವಾಕಿಂಗ್ ಮಾಡುವಂತಿಲ್ಲ, ಬಲದಿಂದ ಎಡಕ್ಕೆ ಯಾರೂ ನಡೆಯುವಂತಿಲ್ಲ ಎಂದು ಬಿಬಿಎಂಪಿ ದೊಡ್ಡ ಬೋರ್ಡ್​ ಹಾಕಿದೆ. ಇದರ ಫೋಟೋ ಈಗ ವೈರಲ್ ಆಗಿದ್ದು, ಪಾರ್ಕ್​ನಲ್ಲಿ ವಾಕಿಂಗ್ ಮಾಡಬಾರದು ಎಂದಾದರೆ ನಾಗಿಣಿ ಡ್ಯಾನ್ಸ್​ ಮಾಡಬಹುದಾ? ಎಂದು ಲೇವಡಿ ಮಾಡಿದ್ದಾರೆ.
 
ಬೆಂಗಳೂರಿನ ಪಾರ್ಕ್​ನ ಗೇಟ್​​ನಲ್ಲಿ ಹಾಕಿರುವ ಒಂದು ಫಲಕದ ಫೋಟೋ ಈಗ ವೈರಲ್ ಆಗಿದೆ. ಇಲ್ಲಿ ಜನರು ಆ್ಯಂಟಿ ಕ್ಲಾಕ್​ವೈಸ್​ (ಬಲದಿಂದ ಎಡಕ್ಕೆ) ನಡೆಯುವಂತಿಲ್ಲ, ವಾಕಿಂಗ್ ಮಾಡುವಂತಿಲ್ಲ, ಜಾಗಿಂಗ್ ಮಾಡುವಂತಿಲ್ಲ ಎಂದು ಬೋರ್ಡ್​ ಹಾಕಲಾಗಿದೆ. ಹಾಗಿದ್ದರೆ ಈ ಪಾರ್ಕ್​ನಲ್ಲಿ ಏನು ಮಾಡಬೇಕು? ಎಂಬುದು ಸದ್ಯಕ್ಕೆ ನೆಟ್ಟಿಗರ ಪ್ರಶ್ನೆಯಾಗಿದೆ. ಈ ಬೋರ್ಡ್​ ಹಾಕುವ ಮೂಲಕ ಬಿಬಿಎಂಪಿ ಸಾಮಾಜಿಕ ಜಾಲತಾಣ ಬಳಕೆದಾರರ ಲೇವಡಿಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments