Publish Date: Wed, 12 Oct 2022 (07:55 IST)
Updated Date: Wed, 12 Oct 2022 (07:57 IST)
ಬಳ್ಳಾರಿ : ಸರ್ಕಾರ ತಪ್ಪು ಮಾಡಿದಾಗ ಅದನ್ನು ಪ್ರಶ್ನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ ಈ ಬಿಜೆಪಿ ಸರ್ಕಾರವನ್ನು ನಾವು ಯಾರೂ ಪ್ರಶ್ನೆ ಮಾಡುವಹಾಗಿಲ್ಲ.
ಪ್ರಶ್ನೆ ಮಾಡಿದರೆ ನಮ್ಮ ಮೇಲೆ ಕೇಸ್ ಹಾಕ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಬಳ್ಳಾರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೇ 15 ರಂದು ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ನಿಮ್ಮೆಲ್ಲರನ್ನುದ್ದೇಶಿ ಮಾತನಾಡಲಿದ್ದಾರೆ ಎಂದು ಹೇಳಿದರು.
ಈ ಸರ್ಕಾರ ನಮ್ಮ ಕಾರ್ಯಕರ್ತರು ನಾಯಕರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ನಮ್ಮ ಕಾರ್ಯಕರ್ತರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತಿದೆ, ನಾಗರಿಕರಿಗೆ ದೊಡ್ಡ ಹೊಡೆತ ನೀಡಿದೆ.
ಇದು ಭ್ರಷ್ಟಾಚಾರ ಸರ್ಕಾರ, ಇವರು ತಮ್ಮ ಅಪ್ಪನ ದುಡ್ಡು ಹೊಡೀತಿಲ್ಲ. ಅದು ನಮ್ಮ ದುಡ್ಡು, ನಾಗರಿಕರ ದುಡ್ಡು ಲೂಟಿ ಮಾಡುತ್ತಿದ್ದಾರೆ. ಇದು 40 ಪರ್ಸೆಂಟ್ ಸರ್ಕಾರ, ಇದನ್ನ ನಾವು ಪ್ರಶ್ನೆ ಮಾಡಿದ್ರೆ ನಮ್ಮ ಮೇಲೆ ಕೇಸ್ ಹಾಕ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.