Webdunia - Bharat's app for daily news and videos

Install App

ಯಾವುದೇ ಮಾಟಮಂತ್ರಗಳೂ ನನ್ನ ಮೇಲೆ ಪರಿಣಾಮ ಬೀರುವುದಿಲ್ಲ - ಸಚಿವ ಕೆ.ಎನ್‌. ರಾಜಣ್ಣ

geetha
ಭಾನುವಾರ, 25 ಫೆಬ್ರವರಿ 2024 (19:41 IST)
ತುಮಕೂರು :ನನಗೂ ಹಾಸನಕ್ಕೂ ಏನು ಸಂಬಂಧವಿದೆಯೋ ಗೊತ್ತಿಲ್ಲ. ನನಗೆ ಹಾಸನದ ಉಸ್ತುವಾರಿ ನೀಡಿರುವುದರಿಂದ   ನನ್ನ ಅಭಿಮಾನಿಗಳು ಹೆದರಿಕೊಂಡು ಬಿಟ್ಟಿದ್ದರು. ಸಾರ್ ನೀವು ಹಾಸನಕ್ಕೆ ಹೋಗುವುದು ಬೇಡ . ಅಲ್ಲಿ ವಾಮಾಚಾರ ಮಾಡ್ತಾರೆ  ಎಂದಿದ್ದರು .ಆದರೆ ನಾನು ಯಾವುದಕ್ಕೂ ಸೊಪ್ಪು ಹಾಕುವುದಿಲ್ಲ. ನಾವು ಉಗ್ರನರಸಿಂಹಸ್ವಾಮಿ ಭಕ್ತರು, ಹಾಗಾಗಿ ನಮಗೆ ಯಾವ ವಾಮಚಾರನೂ ತಾಕೋದಿಲ್ಲ ಎಂದು ಹೇಳಿದ್ದಾಗಿ ಕೆ.ಎನ್‌. ರಾಜಣ್ಣ ನುಡಿದರು. 

 ಲೋಕಸಭಾ ಚುನಾವಣೆಗೆ ನನಗೆ ಹಾಸನದ ಉಸ್ತುವಾರಿ ಹೊಣೆಯನ್ನು ನೀಡಿರುವುದು ನನ್ನ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಆದರೆ ದೇವೇಗೌಡರ ಯಾವುದೇ ಮಾಟಮಂತ್ರಗಳೂ ನನ್ನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಚಿವ ಕೆ.ಎನ್‌. ರಾಜಣ್ಣ ಹೇಳಿದ್ದಾರೆ. ಭಾನುವಾರ ಗುಬ್ಬಿ ವೀರಣ್ಣ ಕಲಾಮಂದಿರದಲ್ಲಿ ನಡೆದ ವಾಲ್ಮೀಕಿ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಯಾವ ವಾಮಾಚಾರ ಮಾಟಮಂತ್ರಗಳಿಗೂ ನಾನು ಹೆದರುವುದಿಲ್ಲ ಎಂದರು. 

ಜೊತೆಗೆ,  ಯಾರಾದ್ರೂ ವಾಮಾಚಾರ ಮಾಡೋರು ಇದ್ರೆ ಸ್ವತಃ ನಾನೇ ಕೂತ್ಕೊಳ್ತೀನಿ.  ನನ್ನ ಮೇಲೆ ವಾಮಾಚಾರ ಮಾಡಲಿ ಎಂದು ಸವಾಲು ಹಾಕಿದ್ದಾಗಿಯೂ ಹೇಳಿಕೊಂಡ ರಾಜಣ್ಣ, ಹಾಗಂತ ವಾಮಾಚರ ತಗುಲುವುದಿಲ್ಲ ಅನ್ಕೋಬೇಡಿ. ನಾನು ಹಾಸನಕ್ಕೆ ಕುಣಿಗಲ್ ಮೂಲಕ ಮೊದಲ ದಿನ ಹೋಗುತ್ತಿದ್ದಾಗ. ಕುಣಿಗಲ್ ನಲ್ಲಿ ಪಟಾಕಿ ಸಿಡಿದು, ಕಣ್ಣಿಗೆ ಏಟಾಗಿತ್ತು. ಡಾಕ್ಟರ್ ಕಣ್ಣು ಕ್ಲೀನ್ ಮಾಡಿ ಹಾಸನಕ್ಕೆ ಹೋಗುವುದು ಬೇಡ ಎಂದಿದ್ದರು. ಹೆದರಿ ಹಾಸನಕ್ಕೆ ಬಂದಿಲ್ಲ ಎಂಬ ಸಂದೇಶ ರವಾನೆಯಾಗಬಾರದು ಎಂಬ ಹಠದಿಂದ ಎರಡೂ ಕಣ್ಣು ಹೋದರೂ ಪರವಾಗಿಲ್ಲ ಎಂದು ಧೈರ್ಯವಾಗಿ ಹಾಸನಕ್ಕೆ ಹೋಗಿದ್ದೆ ಎಂದು ರಾಜಣ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments