Webdunia - Bharat's app for daily news and videos

Install App

ನಮ್ಮವರು ಯಾರೂ ಕಾಂಗ್ರೆಸ್ ಗೆ ಹೋಗಲ್ಲ- ಸದಾನಂದಗೌಡ

Webdunia
ಶನಿವಾರ, 19 ಆಗಸ್ಟ್ 2023 (16:46 IST)
ಆಪರೇಷನ್ ಹಸ್ತ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಿವಿಎಸ್ ವಾಗ್ದಾಳಿ ನಡೆಸಿದ್ದಾರೆ.ಸಿದ್ದರಾಮಯ್ಯ, ಡಿಕೆಶಿ ಸಮುದ್ರದ ಮೇಲೆ ಕಲ್ಲೆಸೆಯುವ ಕೆಲಸ ಮಾಡ್ತಿದಾರೆ.ತಮ್ಮಲ್ಲಿರುವ ಗೊಂದಲ‌ ಮುಚ್ಚಿಕೊಳ್ಳಲು ಹಾರಿಕೆ ಸುದ್ದಿ ಹರಡ್ತಿದಾರೆ.ಮೂರೇ ತಿಂಗಳಲ್ಲಿ ಕಾಂಗ್ರೆಸ್ ನವ್ರ ಕಪಟ ನಾಟಕ ಜನರಿಗೆ ಗೊತ್ತಾಗಿದೆ.ಅವರ ಭರವಸೆ ಈಡೇರಿಸಿಲ್ಲ, ಅವರ ಶಾಸಕರನ್ನು ಸಮಾಧಾನ ಮಾಡಲು ಆಗಿಲ್ಲ.ನಮ್ಮವರು ಯಾರೂ ಕಾಂಗ್ರೆಸ್ ಗೆ ಹೋಗಲ್ಲ?ನಮ್ಮವರೇನು ಇವರ ತಂಬೂರಿ ಹಿಂದೆ ಹೋಗಲು ಇಲಿಗಳಾ?ಬೈರತಿ ಬಸವರಾಜ್ ಕಾಂಗ್ರೆಸ್ ಗೆ ಹೋಗಲ್ಲ ಅಂದಿದಾರೆ.ಗೋಪಾಲಯ್ಯನವರೂ ಕಾಂಗ್ರೆಸ್ ಗೆ ಹೋಗಲ್ಲ, ಬೇಕಾದರೆ ನೇಣು ಹಾಕ್ಕೋತೇನೆ ಅಂದಿದಾರೆ.ಎಸ್ ಟಿ ಸೋಮಶೇಖರ್ ಕೂಡಾ ನಾನು ಕಾಂಗ್ರೆಸ್ ಸೇರ್ತೀನಿ ಅಂತ ಹೇಳಿಲ್ಲ ಅಂದಿದಾರೆ.ಸೋಮಶೇಖರ್ ಜತೆ ಮೊನ್ನೆ ಕರೆಸಿ‌ ಮಾತಾಡಿದ್ದೇನೆ.ಅವರ ಕ್ಷೇತ್ರದಲ್ಲಿ ಕೆಲ ಆಂತರಿಕ ಸಮಸ್ಯೆ ಇದೆ, ಅದನ್ನು ಬಗೆಹರಿಸುವ ಕೆಲಸ ಮಾಡ್ತೇವೆ.ಸೋಮಶೇಖರ್ ಕಾಂಗ್ರೆಸ್ ಗೆ ಹೋಗಲ್ಲ ಅನ್ನೋದು ನಮ್ಮ ನಂಬಿಕೆ ಎಂದು ಸದಾನಂದಗೌಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments