10 ಅಲ್ಲ 50 ಲಕ್ಷ ಕೊಡ್ತೀನಿ - ಡಿ.ಕೆ. ಶಿವಕುಮಾರ್

Webdunia
ಮಂಗಳವಾರ, 19 ಜುಲೈ 2022 (18:44 IST)
ಮೈಸೂರಿನ ಎಚ್.ಡಿ. ಕೋಟೆಯಲ್ಲಿ ಕಾಂಗ್ರೆಸ್​ ವತಿಯಿಂದ ಇಂದು ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಮಾಜ ಸೆಳೆಯುವ ಕಾರ್ಯವೂ ನಡೆಯಿತು. ಎಚ್​.ಡಿ.ಕೋಟೆಯಲ್ಲಿ ಕೆಂಪೇಗೌಡ ಭವನ ನಿರ್ಮಣಕ್ಕೆ 50 ಲಕ್ಷ ಹಣವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಘೋಷಣೆ ಮಾಡಿದರು.
ಭವನ ನಿರ್ಮಾಣಕ್ಕೆ ನೀವು 10 ಲಕ್ಷ ಹಣ ಕೇಳಿದ್ರಿ. ಆದರೆ ಅದು ಇದುವರೆಗೂ ನಿಮಗೆ ಸಿಗಲಿಲ್ಲ. ಆದರೆ ಈಗ 50 ಲಕ್ಷ ರೂಪಾಯಿ ಘೋಷಿಸುತ್ತಿದ್ದೇನೆ. ನಾನು ಕೊಡ್ತಿನೋ ಬೇರೆಯವರ ಕೈಯಲ್ಲಿ ಕೊಡಿಸ್ತಿನೋ ಗೊತ್ತಿಲ್ಲ. ಒಟ್ಟಿನಲ್ಲಿ ಭವನಕ್ಕೆ‌ 50 ಲಕ್ಷ ರೂಪಾಯಿ ಹಣ ಬರುತ್ತೆ ಎಂದು ನುಡಿದರು.
 
ಎಲ್ಲರೂ ಒಗ್ಗಟ್ಟಾಗಿ, ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಮುಂದೆ ನಡೆಯಿರಿ. ನಾನು ಜಾರಿ ನಿರ್ದೇಶನಾಲಯದಿಂದ ತೊಂದರೆ ಅನುಭವಿಸಿದ ಸಂದರ್ಭದಲ್ಲಿ ನನ್ನ ಬೆಂಬಲಕ್ಕೆ ನಿಂತ ಎಚ್‌.ಡಿ.ಕೋಟೆ ಜನರಿಗೆ ಧನ್ಯವಾದ ಎಂದು ಹೇಳಿದರು.
 
ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರನ್ನು ತಮ್ಮ ಸಹೋದರ ಎಂದು ನುಡಿದರು ಡಿಕೆಶಿ. ಬುದ್ಧ, ಬಸವ ಮನೆ‌ಬಿಟ್ಟ ಗಳಿಗೆಯಲ್ಲಿ ನಾನು ಮತ್ತು ಎಚ್​ಡಿಕೆ ರಾಜಕೀಯಕ್ಕೆ ಬಂದಿದ್ದೇವೆ. ಕುಮಾರಸ್ವಾಮಿ ನನ್ನ ಸಹೋದರ. ನನ್ನ ಆತ್ಮೀಯ ಸಹೋದರ ಆಗಿರುವ ಇವರು, ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ನೀವೆಲ್ಲರೂ ರಾಮನಾಗರದ ಜನರಿಗಿಂತಲೂ ಹೆಚ್ಚು ಅಭಿಮಾನ ತೋರಿ ಬರಮಾಡಿಕೊಂಡಿದ್ದೀರಿ. ಎಲ್ಲರಿಗೂ ಧನ್ಯವಾದ ಎಂದು ಶಿವಕುಮಾರ್​ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments