Webdunia - Bharat's app for daily news and videos

Install App

10 ಅಲ್ಲ 50 ಲಕ್ಷ ಕೊಡ್ತೀನಿ - ಡಿ.ಕೆ. ಶಿವಕುಮಾರ್

Webdunia
ಮಂಗಳವಾರ, 19 ಜುಲೈ 2022 (18:44 IST)
ಮೈಸೂರಿನ ಎಚ್.ಡಿ. ಕೋಟೆಯಲ್ಲಿ ಕಾಂಗ್ರೆಸ್​ ವತಿಯಿಂದ ಇಂದು ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಮಾಜ ಸೆಳೆಯುವ ಕಾರ್ಯವೂ ನಡೆಯಿತು. ಎಚ್​.ಡಿ.ಕೋಟೆಯಲ್ಲಿ ಕೆಂಪೇಗೌಡ ಭವನ ನಿರ್ಮಣಕ್ಕೆ 50 ಲಕ್ಷ ಹಣವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಘೋಷಣೆ ಮಾಡಿದರು.
ಭವನ ನಿರ್ಮಾಣಕ್ಕೆ ನೀವು 10 ಲಕ್ಷ ಹಣ ಕೇಳಿದ್ರಿ. ಆದರೆ ಅದು ಇದುವರೆಗೂ ನಿಮಗೆ ಸಿಗಲಿಲ್ಲ. ಆದರೆ ಈಗ 50 ಲಕ್ಷ ರೂಪಾಯಿ ಘೋಷಿಸುತ್ತಿದ್ದೇನೆ. ನಾನು ಕೊಡ್ತಿನೋ ಬೇರೆಯವರ ಕೈಯಲ್ಲಿ ಕೊಡಿಸ್ತಿನೋ ಗೊತ್ತಿಲ್ಲ. ಒಟ್ಟಿನಲ್ಲಿ ಭವನಕ್ಕೆ‌ 50 ಲಕ್ಷ ರೂಪಾಯಿ ಹಣ ಬರುತ್ತೆ ಎಂದು ನುಡಿದರು.
 
ಎಲ್ಲರೂ ಒಗ್ಗಟ್ಟಾಗಿ, ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಮುಂದೆ ನಡೆಯಿರಿ. ನಾನು ಜಾರಿ ನಿರ್ದೇಶನಾಲಯದಿಂದ ತೊಂದರೆ ಅನುಭವಿಸಿದ ಸಂದರ್ಭದಲ್ಲಿ ನನ್ನ ಬೆಂಬಲಕ್ಕೆ ನಿಂತ ಎಚ್‌.ಡಿ.ಕೋಟೆ ಜನರಿಗೆ ಧನ್ಯವಾದ ಎಂದು ಹೇಳಿದರು.
 
ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರನ್ನು ತಮ್ಮ ಸಹೋದರ ಎಂದು ನುಡಿದರು ಡಿಕೆಶಿ. ಬುದ್ಧ, ಬಸವ ಮನೆ‌ಬಿಟ್ಟ ಗಳಿಗೆಯಲ್ಲಿ ನಾನು ಮತ್ತು ಎಚ್​ಡಿಕೆ ರಾಜಕೀಯಕ್ಕೆ ಬಂದಿದ್ದೇವೆ. ಕುಮಾರಸ್ವಾಮಿ ನನ್ನ ಸಹೋದರ. ನನ್ನ ಆತ್ಮೀಯ ಸಹೋದರ ಆಗಿರುವ ಇವರು, ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ನೀವೆಲ್ಲರೂ ರಾಮನಾಗರದ ಜನರಿಗಿಂತಲೂ ಹೆಚ್ಚು ಅಭಿಮಾನ ತೋರಿ ಬರಮಾಡಿಕೊಂಡಿದ್ದೀರಿ. ಎಲ್ಲರಿಗೂ ಧನ್ಯವಾದ ಎಂದು ಶಿವಕುಮಾರ್​ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments