Webdunia - Bharat's app for daily news and videos

Install App

ವರುಣಾದಿಂದ ಸ್ಪರ್ಧಿಸುವುದಿಲ್ಲ, ಅದು ಮುಗಿದ ಅಧ್ಯಾಯ : ಸೋಮಣ್ಣ

Webdunia
ಮಂಗಳವಾರ, 11 ಏಪ್ರಿಲ್ 2023 (09:36 IST)
ಬೆಂಗಳೂರು : ನಾನು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಅದು ಮುಗಿದ ಅಧ್ಯಾಯ, ನಾನು ಕೇಳಿರೋದು ಚಾಮರಾಜನಗರ, ಗೋವಿಂದರಾಜನಗರವಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು.
 
ಇದರಲ್ಲಿ ಚಾಮರಾಜನಗರ, ಗೋವಿಂದರಾಜನಗರದಲ್ಲಿ ಒಂದನ್ನು ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ವರುಣಾದಿಂದ ಸ್ಪರ್ಧೆ ಇಲ್ಲ. ಇದು ಹೈಕಮಾಂಡ್ಗೆ ಕೂಡ ಗೊತ್ತಿದೆ. ಹೈಕಮಾಂಡ್ ಏನು ಮಾಡುತ್ತೆ ನೋಡೋಣ ಎಂದು ಹೇಳಿದರು.

ಬೇರೆ ಅವರ ಮಕ್ಕಳಿಗೆ ಟಿಕೆಟ್ ಕೊಟ್ಟರೆ ನನ್ನ ಮಗನಿಗೂ ಟಿಕೆಟ್ ಕೊಡಿ, ಸಾಕಷ್ಟು ನಾಯಕರ ಮಕ್ಕಳು ಟಿಕೆಟ್ ಕೇಳುತ್ತಿದ್ದಾರೆ. ಅದಕ್ಕೆ ನಾನು ಕೇಳಿದ್ದೀನಿ, ಕೇಳೋದ್ರಲ್ಲಿ ಏನು ತಪ್ಪಿಲ್ಲ. ಹೈಕಮಾಂಡ್ ನಾಯಕರ ಭೇಟಿ ಮಾಡಿದ್ದೀನಿ, ಯಾರ್ಯಾರಿಗೆ ಮನವರಿಕೆ ಮಾಡಬೇಕೋ ಅವರಿಗೆ ಮನವರಿಕೆ ಆಗಿದೆ. ಹೇಗೆ ಮಾಡ್ತಾರೆ ನೋಡೋಣ. ನನ್ನ ಮಗನಿಗೂ ಕೊಡ್ತಾರಾ ನೋಡ್ತೀನಿ. ಬೇರೆ ಅವರಿಗೆ ಕೊಡೋದ್ರಿಂದ ನಾನು ಗುಬ್ಬಿಗೆ ಟಿಕೆಟ್ ಕೊಡಿ ಅಂತ ಕೇಳಿದ್ದೀನಿ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments