Webdunia - Bharat's app for daily news and videos

Install App

ಬಿಜೆಪಿಗೂ ಸರ್ಕಾರ ರಚನೆ ಸುಲಭವಲ್ಲ! ಎರಡನೇ ನಾಟಕಕ್ಕೆ ಸಾಕ್ಷಿಯಾಗುತ್ತಾ ಕರ್ನಾಟಕ

Webdunia
ಗುರುವಾರ, 25 ಜುಲೈ 2019 (09:44 IST)
ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು ಎಂದೇ ಲೆಕ್ಕಾಚಾರ ಹಾಕುತ್ತಿದ್ದರೆ ಅದು ತಪ್ಪಾಗುತ್ತದೆ. ಬಿಜೆಪಿಗೂ ಸರ್ಕಾರ ರಚನೆಯ ಹಾದಿ ಸುಗಮವಾಗಿಲ್ಲ. ಹೀಗಾಗಿ ಕರ್ನಾಟಕ ಮತ್ತೊಂದು ರಾಜಕೀಯ ನಾಟಕಕ್ಕೆ ಸಾಕ್ಷಿಯಾದರೂ ತಪ್ಪಿಲ್ಲ.


ಅತೃಪ್ತ ಶಾಸಕರ ರಾಜೀನಾಮೆ ಇನ್ನೂ ಇತ್ಯರ್ಥವಾಗದಿರುವ ಹಿನ್ನಲೆಯಲ್ಲಿ 225 ಸದನ ಬಲ ಹೊಂದಿರುವ ಕರ್ನಾಟಕದಲ್ಲಿ ಬಹುಮತಕ್ಕೆ 113 ಸ್ಥಾನಗಳು ಬೇಕಾಗಿವೆ. ಬಿಜೆಪಿ ಬಳಿ ಸದ್ಯಕ್ಕೆ 105 ಸ್ಥಾನ ಮಾತ್ರ ಇದೆ.

ಹೀಗಾಗಿ ತರಾತುರಿಯಲ್ಲಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರೂ ಈ ಮೊದಲು ನಡೆದಂತೆ ಮತ್ತೆ ಬಹುತಮ ಸಾಬೀತಿಗೆ ಕಷ್ಟವಾಗುತ್ತದೆ. ಒಂದು ವೇಳೆ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ಬಿಜೆಪಿಗೆ ಬಹುಮತಕ್ಕೆ ಬೇಕಾಗಿರುವ ಶಾಸಕರ ಸಂಖ್ಯಾಬಲವಿರಲಿದೆ.

ಹೀಗಾಗಿಯೇ ಬಿಜೆಪಿ ನಿಯೋಗ ನಿನ್ನೆ ಸ್ಪೀಕರ್ ಭೇಟಿ ಮಾಡಿ ಅತೃಪ್ತರ ರಾಜೀನಾಮೆ ಅಂಗೀಕರಿಸಲು ಕೇಳಿಕೊಂಡಿತ್ತು. ಹೀಗಾಗಿ ಮತ್ತೆ ಚೆಂಡು ಸ್ಪೀಕರ್ ಅಂಗಳಕ್ಕೆ ಬಂದು ನಿಂತಿದೆ. ಇದೇ ಕಾರಣಕ್ಕೇ ಬಿಜೆಪಿ ಈ ಬಾರಿ ಸರ್ಕಾರ ರಚನೆಗೆ ತರಾತುರಿ ಮಾಡುತ್ತಿಲ್ಲ. ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments