Webdunia - Bharat's app for daily news and videos

Install App

ಕ್ಯಾಸಿನೋಗೆ ಜಮೀರ್ ಮಾತ್ರವಲ್ಲ, ಇಡೀ ಟೀಂ ಹೋಗುತ್ತೆ- ಜೆಡಿಎಸ್ ಶಾಸಕ ಸುರೇಶ್ ಗೌಡ

Webdunia
ಬುಧವಾರ, 16 ಸೆಪ್ಟಂಬರ್ 2020 (11:17 IST)
ಬೆಂಗಳೂರು : ಕ್ಯಾಸಿನೋಗೆ ಜಮೀರ್ ಮಾತ್ರವಲ್ಲ, ಇಡೀ ಟೀಂ ಹೋಗುತ್ತೆ. ಪಾಸ್ ಪೋರ್ಟ್ ಗಳನ್ನು ತೆಗೆದು ನೋಡಿದ್ರೆ ಎಲ್ಲಾ ತಿಳಿಯುತ್ತೆ ಎಂದು ಜೆಡಿಎಸ್ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕರ್ನಾಟಕದ ಹಣವೆಲ್ಲಾ ಶ್ರೀಲಂಕಾ ಕ್ಯಾಸಿನೋಗೆ ಹೋಗ್ತಿದೆ. ಕರ್ನಾಟಕದಲ್ಲಿ ಯಾರ್ಯಾರು ಹೆಚ್ಚು ಹಣವನ್ನು ಗಳಿಸಿದ್ದಾರೋ. ಅವರು ಗಳಿಸಿದ ಹಣವನ್ನು ಕ್ಯಾಸಿನೋದಲ್ಲಿ ಕಳೆಯುತ್ತಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಕ್ಯಾಸಿನೋ ಓಪನ್ ಮಾಡಬೇಕು. ಹಣವೊಂದಿದ್ದರೆ ಎಲ್ಲಾ ವಸ್ತುಗಳು ಕ್ಯಾಸಿನೋದಲ್ಲಿ ಸಿಗುತ್ತದೆ. ನಮ್ಮ ಹಣ ನಮ್ಮಲ್ಲೇ ಇರಲಿ ಎಂದು ಸಲಹೆ ಕೊಡುತ್ತೇನೆ ಮತ್ತು ಸರ್ಕಾರಕ್ಕೆ ಸಲಹೆ ನೀಡಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ರಾಜಕಾರಣಿಗಳು ಡ್ರಗ್ಸ್ ತೆಗೆದುಕೊಳ್ಳುವ ಬಗ್ಗೆ ಗೊತ್ತಿಲ್ಲ. ರಾಜ್ಯ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳುವುದಕ್ಕೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಮುಂದಿಟ್ಟಿದ್ದರು. ಅದು ಮುಗಿದ ಬಳಿಕ ಡ್ರಗ್ಸ್ ವಿಚಾರವನ್ನು ಶುರು ಮಾಡಿದ್ದಾರೆ. ಇವೆಲ್ಲವೂ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳು  ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments