Select Your Language

Notifications

webdunia
webdunia
webdunia
webdunia

ನೋಟ್‌ಬ್ಯಾನ್‌ನಿಂದ ಕಾಂಗ್ರೆಸ್ ನಾಯಕರಿಗೆ ಸಂಕಷ್ಟ: ಆರ್.ಅಶೋಕ್

ನೋಟ್‌ಬ್ಯಾನ್‌ನಿಂದ ಕಾಂಗ್ರೆಸ್ ನಾಯಕರಿಗೆ ಸಂಕಷ್ಟ: ಆರ್.ಅಶೋಕ್
ಬೆಂಗಳೂರು , ಗುರುವಾರ, 17 ನವೆಂಬರ್ 2016 (14:50 IST)
ದೇಶದಲ್ಲಿ ಕಪ್ಪು ಹಣ ತಡೆಗಟ್ಟಲು 500, 1000 ರೂಪಾಯಿ ನೋಟುಗಳನ್ನು ಬ್ಯಾನ್ ಮಾಡಿರುವುದರಿಂದ ಕಾಂಗ್ರೆಸ್ ನಾಯಕರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಅವರು ಬೀದಿಗಿಳಿದು ಗಲಾಟೆ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಹಣ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಮೋದಿ ಅವರ ದಿಟ್ಟ ನಿರ್ಧಾರದಿಂದ ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕಪ್ಪು ಹಣ ತಡೆಗಟ್ಟಲು ಪ್ರಧಾನಿ ಮೋದಿ ಅವರು ತೆಗೆದುಕೊಂಡ ನಿರ್ಧಾರವನ್ನು ಜನಸಾಮಾನ್ಯರು ಸ್ವಾಗತಿಸಿದ್ದಾರೆ. ಆದರೆ, ರಾಜಕೀಯ ಉದ್ದೇಶದಿಂದ ವಿಪಕ್ಷಗಳು ಕೇಂದ್ರದ ನಿರ್ಧಾರವನ್ನು ಟೀಕಿಸುತ್ತಿವೆ. ಕಾಂಗ್ರೆಸ್ ನಾಯಕರಿಗೆ ದೇಶದ ಹಿತ ರಕ್ಷಣೆ ಬೇಕಾಗಿಲ್ಲ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಯಿಂದ ಕಪ್ಪುಹಣದ ವಿರುದ್ಧ ಸಮರವಲ್ಲ, ಬಡವರ ವಿರುದ್ಧ ಸಮರ: ಮಮತಾ ಬ್ಯಾನರ್ಜಿ