Webdunia - Bharat's app for daily news and videos

Install App

ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ: ಸರ್ಕಾರದ ವಿರುದ್ಧ ವಿಜಯೇಂದ್ರ ಗರಂ

Sampriya
ಗುರುವಾರ, 27 ಮಾರ್ಚ್ 2025 (16:17 IST)
ಬೆಂಗಳೂರು: ಮತ್ತೇ ಹಾಲಿನ ದರ ₹4 ಹೆಚ್ಚಳ ಮಾಡವು ಮೂಲಕ, ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಮುಂದುವರೆಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.

ಬೆಲೆ ಏರಿಕೆ ಬಗ್ಗೆ ಅಸಮಾಧಾನ ಹೊರಹಾಕಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಪಂಚ ಭಾಗ್ಯಗಳನ್ನು ನಿರ್ವಹಿಸಲು ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರಿಗೆ ಬೆಲೆ ಏರಿಕೆಯ ದೌರ್ಭಾಗ್ಯವನ್ನು ನಿರಂತರ ಹೇರುತ್ತಲೇ ಬರುತ್ತಿದೆ. ಕುಡಿಯುವ ನೀರು, ವಿದ್ಯುತ್ ಬಿಲ್, ಸಾರಿಗೆ, ಅಗತ್ಯ ವಸ್ತುಗಳು ಹೀಗೆ ಒಂದರ ಮೇಲೊಂದರಂತೆ ಬೆಲೆ ಏರಿಕೆಯ ಬಿಸಿಯನ್ನು ಜನ ಅನುಭವಿಸುತ್ತಿರುವ ಹೊತ್ತಿನಲ್ಲೇ, ಈ ಸರ್ಕಾರ ಅಧಿಕಾರಕ್ಕೆ ಬಂದಮೇಲೆ 2 ನೇ ಬಾರಿ ಹಾಲಿನ ದರ ಏರಿಕೆ ಮಾಡುವ ಮೂಲಕ ಬೆಲೆ ಏರಿಕೆ ಬರೆ ಎಳೆಯುವಲ್ಲಿ ಪೈಪೋಟಿಗೆ ಬಿದ್ದಂತೆ ಕಾಣುತ್ತಿದೆ. ಸದ್ಯ ಹಾಲಿನ ದರ 4 ರೂ ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ.

ಹೈನುಗಾರಿಕೆ ಅವಲಂಬಿಸಿರುವ ರೈತ ಸಮುದಾಯಕ್ಕೆ ಹೆಚ್ಚಿನ ದರ ಹಾಗೂ ಪ್ರೋತ್ಸಾಹ ಧನವನ್ನು ಕೊಡುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕೇ ಹೊರತು, ಈ ಕಾರಣವನ್ನು ಮುಂದಿಟ್ಟುಕೊಂಡು ಜನರ ಮೇಲೆ ಬೆಲೆ ಏರಿಕೆಯ ಬಿಸಿ ತಟ್ಟಿಸಲು ಹೊರಟಿರುವುದು 'ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ನಡೆಯಾಗುತ್ತದೆ'. ರೈತರನ್ನೂ ಉತ್ತೇಜಿಸಬೇಕು ಜನಸಾಮಾನ್ಯರ ಹಿತಾಸಕ್ತಿಯನ್ನೂ ಕಾಪಾಡಬೇಕು, ಇದು ಸಮರ್ಥ ಜನಪರ ಹಾಗೂ ಯೋಗ್ಯ ಸರ್ಕಾರದಿಂದ ಮಾತ್ರ ಸಾಧ್ಯವಾಗುತ್ತದೆ. ಇಂತಹ ಯಾವ ಅರ್ಹತೆಗಳೂ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವೇ ಇಲ್ಲ.

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯನ್ನು ಬಿಜೆಪಿ ನಿರಂತರ ಪ್ರತಿಭಟಿಸುತ್ತಲೇ ಬರುತ್ತಿದ್ದರೂ ಈ ಸರ್ಕಾರ ಜನಾಕ್ರೋಶಕ್ಕೆ ಕ್ಯಾರೇ ಎನ್ನುತ್ತಿಲ್ಲ, ಅಧಿಕಾರಕ್ಕಾಗಿ ಕಚ್ಚಾಡುವುದನ್ನು ಬಿಟ್ಟರೆ ಕಾಂಗ್ರೆಸ್ ಸರ್ಕಾರದ ಅಂಗಳದಲ್ಲಿ ಏನೇನು ಈಗ ಉಳಿದಿಲ್ಲ, ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಬೆಲೆ ಏರಿಸುವುದನ್ನು ಬಿಟ್ಟರೆ ಅನ್ಯಮಾರ್ಗವಿಲ್ಲ ಎಂಬ ಪರಿಸ್ಥಿತಿ ಇರುವುದನ್ನು ಸರ್ಕಾರ ಅನಾವರಣಗೊಳಿಸಿಕೊಳ್ಳುತ್ತಿದೆ. ಪ್ರತಿಯೊಂದು ಕುಟುಂಬವೂ ಬಳಸುವ ಹಾಲಿನ ದರವನ್ನು ಏರಿಸಲು ಸಂಪುಟ ನಿರ್ಧರಿಸಿರುವ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ಆಗ್ರಹಿಸುತ್ತೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments