Webdunia - Bharat's app for daily news and videos

Install App

ಹೇಳಿಕೆ ಆಧರಿಸಿ ಮುರುಘಾಶ್ರೀಗಳಿಗೆ ನೋಟಿಸ್!

Webdunia
ಬುಧವಾರ, 31 ಆಗಸ್ಟ್ 2022 (08:13 IST)
ಚಿತ್ರದುರ್ಗ : ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ಸಂಬಂಧ ಮಂಗಳವಾರ ಸಂತ್ರಸ್ತೆಯರು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
 
ಇತ್ತ ಶ್ರೀಗಳ ವಿರುದ್ಧ ಕೇಸ್ ದಾಖಲಾದಾಗಿನಿಂದ ಪರ ಹಾಗೂ ವಿರೋಧದ ಚರ್ಚೆಗಳು ಶುರುವಾಗಿವೆ. ಮಂಗಳವಾರ ಸಂಜೆ ವೇಳೆ ಕೋರ್ಟ್ ನಲ್ಲಿ ಸಂತ್ರಸ್ತೆಯರು ಹೇಳಿಕೆ ದಾಖಲು ಮಾಡಿದ್ದಾರೆ. ಸಿಆರ್ ಪಿಸಿ164 ಅಡಿ ಜಡ್ಜ್ ಎದುರು ಹೇಳಿಕೆ ದಾಖಲಿಸಿದ್ದಾರೆ.

ಹೇಳಿಕೆ ದಾಖಲಿಸಿದ ಸೀಲ್ಡ್ ಕವರ್ ನಾಳೆ ತನಿಖಾಧಿಕಾರಿ ಕೈಸೇರಲಿದೆ. ಈ ಮೂಲಕ ನಾಳೆ ಪೊಲೀಸರು ಮುರುಘಾ ಶ್ರೀಗೆ ನೋಟೀಸ್ ನೀಡುವ ಸಾಧ್ಯತೆಗಳಿವೆ. ನಾಳೆ ಮುರುಘಾಶ್ರೀ ವಶಕ್ಕೆ ಪಡೆದು ವಿಚಾರಣೆ ಹಾಗೂ ಮೆಡಿಕಲ್ ಟೆಸ್ಟ್ ನಡೆಯುವ ಸಾಧ್ಯತೆಗಳಿದೆ.

ಇತ್ತ ಚಿತ್ರದುರ್ಗದ ಪ್ರಸಿದ್ಧ ಮುರುಘಾ ಮಠದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದು ರಾಜ್ಯಾದ್ಯಂತ ಪರ ಹಾಗೂ ವಿರೋಧ ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೆ ಫೋಕ್ಸೊ ಕೇಸ್ನಲ್ಲಿ ಸಿಲುಕಿರುವ ಮುರುಘಾ ಶರಣರು, ಆರೋಪದಿಂದ ಮುಕ್ತರಾಗುವವರೆಗೆ ಪೀಠ ತ್ಯಾಗ ಮಾಡುವಂತೆ ಮಾಜಿ ಸಚಿವ ಹಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ. ಈ ಸಂಬಂಧ ವಿವಿಧ ಸಂಘಟನೆಗಳು ಹೋರಾಟಕ್ಕೆ ಮುಂದಾಗಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments