Webdunia - Bharat's app for daily news and videos

Install App

ಮಾರ್ಚ್ 21ಕ್ಕೆ 15 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ

Webdunia
ಶುಕ್ರವಾರ, 18 ಮಾರ್ಚ್ 2022 (20:05 IST)
ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 'ಕಲ್ಯಾಣ ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರ ನೇಮಕ ಸೇರಿದಂತೆ ಒಟ್ಟಾರೆ 15,000 ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. 2023-24ನೇ ಸಾಲಿಗೆ ಶಿಕ್ಷಕರು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದರು.
 
'ಮಾರ್ಚ್ 21ಕ್ಕೆ ಅಧಿಸೂಚನೆ ಹೊರಡಿಸಲಾಗುತ್ತದೆ. ಮಾ.23ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 22ರ ವರೆಗೆ ಅವಕಾಶ ಇದೆ. ಮೇ 21 ಮತ್ತು ಮೇ 22ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿವೆ' ಎಂದು ಸಚಿವರು ಮಾಹಿತಿ ನೀಡಿದರು.
 
ಜಿಲ್ಲಾವಾರು ಶಿಕ್ಷಕರ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯತೆ ಅನುಸಾರ ಹುದ್ದೆಗಳನ್ನು ಜಿಲ್ಲೆಗಳ ನಡುವೆ ಹಂಚಿಕೆ ಮಾಡಲಾಗಿದೆ. ಎಂಜಿನಿಯರಿಂಗ್, ಬಯೋಟೆಕ್ನಾಲಜಿ ಪದವೀಧರರಿಗೆ ಹೊಸದಾಗಿ ಅವಕಾಶ ನೀಡಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಶೇ.1ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ' ಎಂದು ಸಚಿವರು ತಿಳಿಸಿದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ