Webdunia - Bharat's app for daily news and videos

Install App

ಬರಪೀಡಿತ ತಾಲೂಕು: ನಿಖರ ಬೆಳೆ ಹಾನಿ ಮಾಹಿತಿ ಸಲ್ಲಿಕೆಗೆ ಸೂಚನೆ

Webdunia
ಗುರುವಾರ, 20 ಸೆಪ್ಟಂಬರ್ 2018 (20:09 IST)
ಕಲಬುರಗಿ ಜಿಲ್ಲೆಯ ಬರಪೀಡಿತ ತಾಲೂಕುಗಳಲ್ಲಿ   ಬೆಳೆಹಾನಿಯ ಜಂಟಿ ಸಮೀಕ್ಷೆ ಕೈಗೊಂಡು ವಾಸ್ತವಿಕ ಮತ್ತು ವಿಸ್ವಾಸಾರ್ಹವಾದ ನಿಖರ ಮಾಹಿತಿ ಸಂಗ್ರಹಿಸುವಂತೆ ಕಲಬುರಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಬೆಳೆ ಹಾನಿಯ ಜಂಟಿ ಸಮೀಕ್ಷೆಯ ಕುರಿತ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಕಂದಾಯ, ಕೃಷಿ, ತೋಟಗಾರಿಕೆ  ಹಾಗೂ ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಜಂಟಿ ಸಮೀಕ್ಷೆಗೆ ನೇಮಿಸಲಾಗಿದೆ. ಕೇಂದ್ರ ಸರ್ಕಾರ ಬರ ನಿರ್ವಹಣೆ ಕೈಪಿಡಿಯಲ್ಲಿ ಸೂಚಿಸಿರುವ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಿ   ಸೆಪ್ಟೆಂಬರ್ 25 ರೊಳಗಾಗಿ ಸಲ್ಲಿಸಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತಲಾದ 65 ಸಾವಿರ ಹೆಕ್ಟೇರ್ ಉದ್ದು ಹಾಗೂ 4.5 ಲಕ್ಷ ಹೆಕ್ಟೇರ್ ಪ್ರದೇಶದ ತೊಗರಿ ಬೆಳೆಯು ಮಳೆಯ ಅಭಾವದಿಂದ ಹಾನಿಗೊಳಗಾಗಿದೆ. ಈಗಾಗಲೇ ಉದ್ದು ಕಟಾವು ಪ್ರಾರಂಭವಾಗಿದ್ದು, ಜಂಟಿ ಸಮೀಕ್ಷಾ ತಂಡವು ಪ್ರತಿ ತಾಲೂಕಿನ 10 ಪ್ರತಿಶತ ಹಳ್ಳಿಗಳನ್ನು ಮಾದರಿಯನ್ನಾಗಿಟ್ಟುಕೊಂಡು ಒಂದು ಗ್ರಾಮದಿಂದ ಒಂದು ಎಕರೆಗೆ ಕಡಿಮೆಯಿಲ್ಲದ 5 ಹೊಲಗಳ ನೆಲದ ಸತ್ಯತೆ (ಗ್ರೌಂಡ್ ಟ್ರುಥಿಂಗ್) ಬಗ್ಗೆ ಛಾಯಾಚಿತ್ರ ತೆಗೆದು ವೆಬ್‍ಸೈಟ್‍ನಲ್ಲಿ ದಾಖಲಿಸಬೇಕು. ಇದರ ಆಧಾರದ ಮೇಲೆ ಕೇಂದ್ರ ಸರ್ಕಾರವು ಪರಿಹಾರಧನ ನಿಗದಿ ಮಾಡಲಿದೆ. ಈ ಗ್ರೌಂಡ್ ಟ್ರುಥಿಂಗ್ ಸಮೀಕ್ಷೆಯನ್ನು ಹಾನಿಗೊಳಗಾದ ಬೆಳೆಯ ನಿಜ ಪರಿಸ್ಥಿತಿ ತಿಳಿಸಲು ನಿಖರವಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments