Webdunia - Bharat's app for daily news and videos

Install App

ಚಾಮರಾಜಪೇಟೆಯಲ್ಲಿ ಈಗ ಮತ್ತೊಂದು ವಿವಾದದ ಹೊಗೆ

Webdunia
ಸೋಮವಾರ, 18 ಜುಲೈ 2022 (17:22 IST)
ಚಾಮರಾಜಪೇಟೆ ಮೈದಾನದ ಕಿಚ್ಚು ಆರುವ ಮುನ್ನವೇ ಈಗ ಮತ್ತೊಂದು ಕಿಚ್ಚುಹೊತ್ಕೊಂಡಿದೆ.ಮಸ್ ಜಿದ್ ಎ ಅಲ್ ಖುಬ ಎಂಬ ಮಸೀದಿಯನ್ನ ಡೆಮಾಲಿಷನ್ ಮಾಡಲು ಬಿಬಿಎಂಪಿ ನೋಟೀಸ್ ನೀಡಿದೆ.ಮಸ್ ಜಿದ್ ಎ ಅಲ್ ಖುಬ ವಿಜಯನಗರದಲ್ಲಿರೋ ಮಸೀದಿ.ಮುಸ್ಲಿಂವರು ಇಲ್ಲಿ ನಮಾಜ್ ಮಾಡ್ತಾರೆ ಇಂತಹ ನಮಾಜ್ ಮಾಡುವ ಈ ಕಟ್ಟಡವನ್ನ ಈಗ ಡೆಮಾಲಿಷನ್ ಮಾಡಲು ಬಿಬಿಎಂಪಿ ನೋಟೀಸ್ ನೀಡಿದೆ.ಮಸೀದಿಯೂ ಸಾರ್ವಜನಿಕರ ಓಡಾಟಕ್ಕೆ ಮೀಸಲಿಟ್ಟ ಐದು ಅಡಿ ಪ್ಯಾಸೇಜ್ ನ ಒತ್ತುವರಿ ಮಾಡ್ಕೊಂಡು ಕಟ್ಟಡಲಾಗಿದೆ.ಈಗ ಒತ್ತುವರಿ ಮಾಡಿ ನಿರ್ಮಿಸಿರುವ ಭಾಗವನ್ನ ತೆರವು ಮಾಡಿ ಬಿಬಿಎಂಪಿ ವಶಕ್ಕೆ ಪಡೆಯಲು ಪ್ರಾದೇಶಿಕ ಆಯುಕ್ತರು ಬಿಬಿಎಂಪಿಗೆ ಆದೇಶ ನೀಡಿದ್ದಾರೆ.ಇನ್ನು ಆದೇಶದ ಅನುಸಾರ ಬಿಬಿಎಂಪಿ ಮಸೀದಿಗೆ ಡೆಮಾಲಿಷನ್ ಆರ್ಡರ್ ನೀಡಿದೆ.ಒತ್ತುವರಿ ಮಾಡಲಾಗಿದೆ ಎಂಬ ಭಾಗವನ್ನ ತೆರವು ಮಾಡಲು ಮಸ್ ಜಿದ್ ಎ ಅಲ್ ಖುಬ ಮಸೀದಿಯ ಮುಖ್ಯಸ್ಥರಿಗೆ ಬಿಬಿಎಂಪಿ ನೋಟೀಸ್ ಜಾರಿ ಮಾಡಿದೆ.ನಿವೇಶನ ಸಂಖ್ಯೆ13 ಹಾಗೂ 15 ರಲ್ಲಿ ಮಸೀದಿ ನಿರ್ಮಾಣವಾಗಿದ್ದು,ನಿವೇಶನ ಸಂಖ್ಯೆ13 ರ ಮಾಲೀಕರಾಗಿದ್ದ ಪಿ ಬಾಷಾ ಒಂದು ಟ್ರಸ್ಟ್ ಗೆ ಬರೆದುಕೊಟ್ಟಿದ್ರು. ನಂತರ ನಿವೇಶನ ಸಂಖ್ಯೆ15 ರ ಮಾಲೀಕರು ಅಮೀನಾ ಎಂಬುವವರು ಕೂಡಾ ನಿವೇಶನವನ್ನ ಮಸೀದಿಗೆ ನೀಡಿದ್ದಾರೆ‌ .ಈ ಎರಡು ನಿವೇಶನಗಳನ್ನ ಒಂದೂಗೂಡಿಸಿ ಮಸೀದಿ ನಿರ್ಮಾಣ ಮಾಡಲಾಗಿತ್ತು.ಆದ್ರೆ, ಎರಡು ಸೈಟ್ ಗಳ ಮಧ್ಯೆ ನಿವೇಶನ ಸಂಖ್ಯೆ14 ಕೂಡಾ ಇತ್ತಂತೆ.ಅದನ್ನ ಒತ್ತುವರಿ ಮಾಡ್ಕೊಂಡು ಮಸೀದಿ ನಿರ್ಮಾಣ ಮಾಡಿದ್ದಾರೆ.ನಿವೇಶನ ಸಂಖ್ಯೆ 14 ,5.5 ಅಡಿ ಅಗಲ ಹಾಗೂ 45 ಅಡಿ ಉದ್ದವಿತ್ತು ಅದರನ್ನ ಸಾರ್ವಜನಿಕರ ಓಡಾಟಕ್ಕೆ ಪ್ಯಾಸೇಜ್ ಇತ್ತಂತೆ.ಅದನ್ನ ಒತ್ತುವರಿ ಮಾಡಿ ಮಸೀದಿ ನಿರ್ಮಾಣ ಮಾಡಲಾಗಿದೆ.ಆದ್ರೆ ಇದಕ್ಕೆ ಹಿಂದೆ ಬಿಬಿಎಂಪಿ ಖಾತಾ ಕೂಡಾ ಮಾಡಿಕೊಟ್ಟಿತ್ತು.ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ವಾದ ಪ್ರತಿವಾದಗಳು ನಡೆದು ಅಂತಿಮ ಆದೇಶ ಹೊರಡಿಸಲಾಗಿದೆ. ಅದರಂತೆ ನಿವೇಶನ ಸಂಖ್ಯೆ 14 ರ ಐದು ಅಡಿ ಜಾಗ ಪಾಲಿಕೆ ಸ್ವತ್ತೆಂದು ಘೋಷಿಸಿದ್ದು .ಸಾರ್ವಜನಿಕರ ಸ್ವತ್ತೆಂದು ಘೋಷಣೆ ಮಾಡಿದ್ದು ತಕ್ಷಣ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲು ಬಿಬಿಎಂಪಿಗೆ ಪ್ರಾದೇಶಿಕ ಆಯುಕ್ತರು ಆದೇಶ ನೀಡಿದ್ದಾರೆ.ಅದರಂತೆ ಬಿಬಿಎಂಪಿ ಕೂಡಾ ಮಸೀದಿಗೆ ಡೆಮಾಲಿಷನ್ ನೋಟೀಸ್ ಜಾರಿ ಮಾಡಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments