Select Your Language

Notifications

webdunia
webdunia
webdunia
webdunia

ರೈಲ್ವೆಯಲ್ಲಿ ಕಲ್ಲು ಎಸೆತವಾದಲ್ಲಿ ಕೇಸ್ ಮಾಡಬಹುದು

Train
ಬೆಂಗಳೂರು , ಭಾನುವಾರ, 31 ಅಕ್ಟೋಬರ್ 2021 (15:51 IST)
ಬೆಂಗಳೂರು ರೈಲ್ವೆ ವಿಭಾಗದಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟ ಮಾಡುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಹೆಬ್ಬಾಳ-ಬಾನಸವಾಡಿ, ಲೊಟ್ಟೆಗೊಲ್ಲಹಳ್ಳಿ-ಹೆಬ್ಬಾಳ ಹಾಗೂ ಚನ್ನಸಂದ್ರ-ತುಮಕೂರು ಠಾಣೆಗಳನ್ನು ಟಾರ್ಗೆಟ್ ಮಾಡಿ ಕಲ್ಲುತೂರಾಟ ನಡೆಸಲಾಗುತ್ತಿದೆ.ಸಭೆಯ ಬಳಿಕ ಮಾತನಾಡಿರುವ ಕಿಶೋರ್, ಇಂತಹ ಘಟನೆಗಳನ್ನು ಸಾರ್ವಜನಿಕರು ವರದಿ ಮಾಡಬಹುದಾಗಿದೆ ಎಂದು ಹೇಳಿದ್ದಾರೆ. ರೈಲ್ವೆ ಇಲಾಖೆಯ ಆಸ್ತಿ ಸಾರ್ವಜನಿಕ ಆಸ್ತಿಯಾಗಿದ್ದು, ಇಲಾಖೆಯ ಆಸ್ತಿ ಹಾನಿ ರಾಷ್ಟ್ರೀಯ ನಷ್ಟವಾಗುತ್ತದೆ.
 
ರೈಲುಗಳಿಗೆ ಕಲ್ಲು ತೂರಾಟ ಮಾಡುವುದನ್ನು ವರದಿ ಮಾಡುವುದಕ್ಕೆ ಸಾರ್ವಜನಿಕರು 139 ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಬಹುದಾಗಿದೆ ಎಂದು ಕಿಶೋರ್ ಹೇಳಿದ್ದಾರೆ. ಕಲ್ಲು ತೂರಾಟ ಮಾಡುವುದರಿಂದ ಆಸ್ತಿ ಹಾನಿಯಾವುದು, ಭದ್ರತಾ ವಿಷಯಗಳಷ್ಟೇ ಅಲ್ಲದೇ ಮಾರಣಾಂತಿಕವೂ ಆಗಿದೆ. ಭುವನೇಶ್ವರ್ ರೈಲಿಗೆ ಕಲ್ಲು ತೂರಾಟ ಮಾಡಿದ್ದ ವ್ಯಕ್ತಿಯನ್ನು ರೈಲ್ವೆ ಕಾಯ್ದೆಯ ಸೆಕ್ಷನ್ 147 & 154 ಅಡಿಯಲ್ಲಿ ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏರ್ಪೋರ್ಟ್ ಗೆ ಮತ್ತೆ ಬಿಎಂಟಿಸಿ