Select Your Language

Notifications

webdunia
webdunia
webdunia
webdunia

‘1 ಕೋಟಿ ಪರಿಹಾರ ಕೊಡಿ’

‘1 ಕೋಟಿ ಪರಿಹಾರ ಕೊಡಿ’
bangalore , ಗುರುವಾರ, 14 ಏಪ್ರಿಲ್ 2022 (20:05 IST)
ಉಡುಪಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಗುತ್ತಿಗೆದಾರ ಸಂತೋಷ್ ನಿರ್ವಹಿಸಿರುವ ₹ 4 ಕೋಟಿ ಬಿಲ್ತಕ್ಷಣ ಬಿಡುಗಡೆ ಮಾಡಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ. ಸಂತೋಷ್ ಕುಟುಂಬಕ್ಕೆ ₹ 1 ಕೋ ಟಿ ಪರಿಹಾರ ನೀಡಬೇಕು. ಪತ್ನಿಗೆ ಸರ್ಕಾರಿ ಕೆಲಸ ನೀಡಬೇಕು. ಆತ್ಮಹತ್ಯೆ ಪ್ರಕರಣದಲ್ಲಿ ಮೂವರ ವಿರುದ್ಧ ಎಫ್ಐಆರ್ ಆಗಿದ್ದರೂ , ಈವರೆಗೆ ಆರೋಪಿಗಳನ್ನು ಬಂಧಿಸಿಲ್ಲ. ಮೂವರನ್ನೂ ಬಂಧಿಸಲು ಬೇಕಿರುವಷ್ಟು ಸಾಕ್ಷ್ಯಗಳು ಸಂತೋಷ್​ ಮೊಬೈಲ್​ನಲ್ಲಿದೆ. ಸಾಕ್ಷ್ಯ ತಿರುಚಲು ಹುನ್ನಾರ ನಡೆಯುತ್ತಿರುವ ಶಂಕೆಯಿದೆ ಎಂದು ಅಭಿಪ್ರಾಯಪಟ್ಟರು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಮಾಡಬೇಕು, ಬಂಧಿಸಿ, ಶಿಕ್ಷೆ ವಿಧಿಸಬೇಕು. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಸಂತೋಷ್ ಅಂತ್ಯಕ್ರಿಯೆ