ಶಿಶುಪಾಲನಾ ಕೇಂದ್ರ ತೆರೆಯುವ ಸರ್ಕಾರದ ನಿರ್ಧಾರಕ್ಕೆ ವಿರೋಧ

Webdunia
ಮಂಗಳವಾರ, 8 ಆಗಸ್ಟ್ 2023 (16:02 IST)
ಶಿಶುಪಾಲನಾ ಕೇಂದ್ರ ತೆರೆಯುವ ಸರ್ಕಾರದ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.ಶಿಶುಪಾಲನಾ ಕೇಂದ್ರಗಳನ್ನು ತೆರೆಯುವ ಬದಲು ಅಂಗನವಾಡಿಗಳನ್ನು ಬಲಪಡಿಸಿ ಸಿಎಂ ಗೆ ಪತ್ರ ಬರೆಯಲು ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್ ಮುಂದಾಗಿದೆ.ನರೇಗಾ ಯೋಜನೆಯಡಿ ಕೆಲಸಕ್ಕೆ ತೆರಳುವ ಮಹಿಳೆಯರ ಮಕ್ಕಳನ್ನು ಬಿಟ್ಟು ಹೋಗಲು ಈ ಕೇಂದ್ರಗಳನ್ನು ತೆರೆಯಲಾಗಿದೆ.
 
ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ.ಪ್ರತಿದಿನ ಒಂಭತ್ತರಿಂದ ಸಂಜೆ ಆರರವರೆಗೆ ಈ ಕೇಂದ್ರಗಳು ಡೇ ಕೇರ್ ಮಾದರಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ.ಮಕ್ಕಳ ಪಾಲನೆ, ಆಟ, ಊಟದ ವ್ಯವಸ್ಥೆ ಇರುವ ಶಿಶು ಕೇಂದ್ರಗಳು ಮಿನಿ ಅಂಗನವಾಡಿ ಕೇಂದ್ರಗಳಂತೆ ಕಾರ್ಯ ನಿರ್ವಹಿಸುತ್ತವೆ.ಈಗಾಗಲೇ ರಾಜ್ಯದಲ್ಲಿ ಇರುವ ಅಂಗನವಾಡಿ ಕೇಂದ್ರಗಳಿಗೇ ಸರಿಯಾದ ವ್ಯವಸ್ಥೆ ಇಲ್ಲ.ಇಂತಹದರಲ್ಲಿ ಶಿಶು ಪಾಲನಾ ಕೇಂದ್ರ ನಿರ್ಮಿಸುವ ಅಗತ್ಯ ಏನಿದೆ?ಶಿಶುಪಾಲನಾ ಕೇಂದ್ರಗಳು ಪಂಚಾಯತ್ ರಾಜ್ ಅಡಿಯಲ್ಲಿ ಬಂದರೂ ನಿರ್ವಹಣೆಗೆ ಮಾಡೋದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿಯೇ ಅಂಗನವಾಡಿ ಕೇಂದ್ರಗಳು ಬರುತ್ತವೆ.ಸಪರೇಟ್ ಕೇಂದ್ರಗಳನ್ನು ತೆರೆಯುವ ಬದಲು ಅಂಗನವಾಡಿಗಳನ್ನೇ ಅಭಿವೃದ್ದಿಪಡಿಸಿ ಅನ್ನೋದು ರಾಜ್ಯ ಅಂಗನವಾಡಿ ನೌಕರರ ಮತ್ತು ಸಹಾಯಕಿಯರ  ಫೆಡರೇಶನ್ ಆಗ್ರಹವಾಗಿದೆ.ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಗೆ ಪತ್ರ ಬರೆಯಲು ಫೆಡರೇಶನ್ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments