Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಯುಕ್ತಕ್ಕೆ ದೂರು ನೀಡಿದ ಎನ್ ಆರ್ ರಮೇಶ್

Webdunia
ಬುಧವಾರ, 12 ಅಕ್ಟೋಬರ್ 2022 (14:31 IST)
ಮಾಜಿ ಸಿಎಂ ಸಿದ್ದರಾಮಯ್ಯ‌ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.ಸರ್ಕಾರಿ ಸ್ವತ್ತನ್ನ ಡಿನೊಟಿಫೈ ಮಾಡಿರೋ ಆರೋಪದಲ್ಲಿ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ರಿಂದ ದೂರು ದಾಖಲಾಗಿದೆ.ಕಾನೂನು ಗಾಳಿಗೆ ತೂರಿ ಸರ್ಕಾರಿ ಸ್ವತ್ತನ್ನ ಡಿನೊಟಿಫೈ ಮಾಡಿದ್ದಾರೆಂದು , 200 ಕೋಟಿಯ ಸರ್ಕಾರಿ ಸ್ವತ್ತನ್ನು ಡಿ - ನೋಟಿಫಿಕೇಷನ್ ಮಾಡಿದ್ದಾರೆಂದು ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿಬಂದಿದೆ.
 
ಲಾಲ್‍ ಬಾಗ್ ಸಿದ್ಧಾಪುರ ಗ್ರಾಮದ ೨ ಎಕರೆ ೩೯.೫ ಗುಂಟೆ ಜಮೀನು ದುರುಪಯೋಗಪಡಿಸಿಕೊಂಡಿದ್ದಾರೆಂದು ದೂರುದಾಖಲಾಗಿದೆ.ಬಿಡಿಎ ಉದ್ಯಾನವನ, ಸಾರ್ವಜನಿಕ ಬಳಕೆಗೆ ಮೀಸಲಿಟ್ಟ ಜಾಗವನ್ನ ಬಿಲ್ಡರ್ ಗೆ ಅನುಕೂಲ ಮಾಡಿಕೊಟ್ಟಿದ್ದಾರೆಂದು,ನಿಗಧಿತ ಜಾಗದಲ್ಲಿ ಹಲವು ನರ್ಸರಿಗಳು ಕಾರ್ಯ ನಿರ್ವಹಿಸುತ್ತಿದ್ದ ಜಾಗ 
ಅಶೋಕ್ ಧಾರಿವಾಲ್ ಖಾಸಗಿ ಬಿಲ್ಡರ್ ಗೆ ಅನುಕೂಲಮಾಡಿಕೊಟ್ಟಿದ್ದಾರೆಂದು ಆರೋಪ ಕೇಳಿಬರುತ್ತಿದೆ.ವಾಣಿಜ್ಯ ಸಂಕೀರ್ಣ ಬಳಕೆಗೆ ಅಶೋಕಗ ಧಾರಿವಾಲ್ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು.ಅಶೋಕ್ ಧಾರಿವಾಲ್  ಸಲ್ಲಿಸಿದ್ದ ಅರ್ಜಿಗಳನ್ನ ೨೦೧೩ ಕ್ಕೂ ಮೊದಲು  ಎರಡು ಬಾರಿ ತಿರಸ್ಕಾರ ಮಾಡಿದ್ದ ರಾಜ್ಯ ೨೦೧೪ ರಲ್ಲಿ ಅಶೋಕ್ ಧಾರಿವಾಲ್ ಅರ್ಜಿ ಸಲ್ಲಿಸುತ್ತಿದ್ದಂತೆ ಅನುಮೋದನೆ ಕೊಟ್ಟ ರಾಜ್ಯ ಬಿಡಿಎ ಈ ಜಾಗವನ್ನ ಪಾರ್ಕ್, ಸಾರ್ವಜನಿಕ ಬಳಕೆಗೆ ಮೀಸಲಿಟ್ಟಿತ್ತು.ಸಾರ್ವಜನಿಕರ ಬಳಕೆಗೆ ಮೀಸಲಿಟ್ಟ ಜಾಗವನ್ನ ಅಭಿವೃದ್ಧಿ ಮಾಡುವಂತಿಲ್ಲ ಹಾಗೂ Change of land use ಆದೇಶ ನೀಡುವಂತಿಲ್ಲ ಎಂಬ ಆದೇಶವಿದೆ.
 
De - Notify ಮಾಡುವ ಮೊದಲುವBMPC (Bangalore Metropolitan Planning Committee ಒಪ್ಪಿಗೆ ಅಗತ್ಯ,
೨೦೧೪ ರಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ BMPC ಒಪ್ಪಿಗೆ ಪಡೆಯದೆ ಡಿ ನೊಟಿಫೈ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖವಾಗಿದೆ.De - Notify” ಎಂಬುದರ ಬದಲಾಗಿ “Re Do” ಎಂಬ ಪದ ಬಳಸಿ ಈ ಕಾನೂನು ಬಾಹಿರ ಕಾರ್ಯಮಾಡಿದ್ದಾರೆಂದು ರಮೇಶ್ ಆರೋಪ ಮಾಡಿದ್ದಾರೆ.
De - Notification" ಮಾಡಲು ಸಹಕರಿಸಿದ ಅಂದಿನ ಬಿಡಿಎ ಆಯುಕ್ತ ಶ್ಯಾಂ ಭಟ್ ವಿರುದ್ಧವೂ ದೂರು ನೀಡಲಾಗಿದೆ. ಈ ಎಲ್ಲ ದೂರುಗಳಿವೆ ಸಂಬಂಧಿಸಿದಂತೆ ಕೂಡಲೇ ಸಿಐಡಿ ತನಿಖೆಗೆ ವಹಿಸುವಂತೆ ರಮೇಶ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments