Webdunia - Bharat's app for daily news and videos

Install App

ಬೆಂಗಳೂರಿನ ನೃಪತುಂಗ ರಸ್ತೆ 2 ತಿಂಗಳು ಬಂದ್

Webdunia
ಮಂಗಳವಾರ, 28 ಫೆಬ್ರವರಿ 2017 (10:10 IST)
ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತಿದ್ದ ಬೆಂಗಳೂರಿನ ನೃಪತುಂಗ ರಸ್ತೆಯನ್ನ ಇಂದಿನಿಂದ 2 ತಿಂಗಳು ಬಂದ್ ಮಾಡಲಾಗಿದೆ. ಬಿಬಿಎಂಪಿಯ ಟೆಂಡರ್ ಶ್ಯೂರ್ ಕಾಮಗಾರಿ ಹಿನ್ನೆಲೆಯಲ್ಲಿ ಖಾಸಗಿ ವಾಹನ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. 14 ಮೀಟರ್ ರಸ್ತೆಯಲ್ಲಿ ಸದ್ಯ 7 ಮೀಟರ್ ಕಾಮಗಾರಿ ನಡೆಯುತ್ತಿದ್ದು, ಹಂತ ಹಂತವಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ. ಹೀಗಾಗಿ, ಅರ್ಧ ರಸ್ತೆಯಲ್ಲಿ ಸರ್ಕಾರಿ ಬಸ್ ಮತ್ತು ಸರ್ಕಾರಿ ವಾಹನಗಳಿಗೆ ಪ್ರವೇಶ ನೀಡಲಾಗಿದೆ.


ಮ್ಯಾಜಿಸ್ಟ್ರೇಟ್ ಕೋರ್ಟ್, ಮಾರ್ಥಾಸ್ ಆಸ್ಪತ್ರೆ, ಲೋಕೋಪಯೋಗಿ ಇಲಾಖೆ ಕಚೇರಿಗಳು, ಆರ್`ಬಿಐ, ಡಿಜಿಪಿ ಕಚೇರಿಗಳು ಇದೇ ರಸ್ತೆಯಲ್ಲಿರುವುದರಿಂದ ಸಾರ್ಬಜನಿಕರು ಸಂಕಷ್ಟಕ್ಕೆ ತುತ್ತಾಗುವುದು ಖಂಡಿತಾ. ಅದರಲ್ಲೂ ಕಾರ್ಪೊರೇಶನ್ ಕಡೆಗೆ ಹೋಗುವವರು, ಬಿಬಿಎಂಪಿ ಕಚೇರಿಗೆ ತೆರಳುವವರಿಗೂ ತೊಂದರೆ ಆಗಲಿದೆ.

ಬದಲಿ ಮಾರ್ಗ ಹೇಗೆ..?: ನೃಪತುಂಗ ರಸ್ತೆಯ ಬಂದ್`ನಿಂದಾಗಿ ಜನರಿಗಾಗುವ ತೊಂದರೆ ತಪ್ಪಿಸಲು ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಮೆಜೆಸ್ಟಿಕ್ ಕಡೆಯಿಂದ ಹಡ್ಸನ್ ರಸ್ತೆ ಮಾರ್ಗವಾಗಿ ಕಾರ್ಪೊರೇಶನ್ ಕಡೆ ತೆರಳುವವರು ಕೆ.ಆರ್. ಸರ್ಕಲ್`ನಿಂದ ಕಬ್ಬನ್ ಪಾರ್ಕ್ ಪ್ರವೇಶಿಸಿ ಗ್ರಂಥಾಲಯದ ಬಳಿ ಬಲತಿರುವು ಪಡೆದು ಕಾರ್ಪೊರೇಶನ್ ಕಡೆಗೆ ಹೋಗಬಹುದಾಗಿದೆ. ಈ ರಸ್ತೆಯನ್ನ ಒನ್ ವೇ ಮಾಡಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments