Select Your Language

Notifications

webdunia
webdunia
webdunia
webdunia

ಎನ್. ಎಸ್. ಐ. ರಾಷ್ಟ್ರೀಯ ಭದ್ರತಾ ಸಲಹೆಗಾರ ಮನೆಗೆ ನುಗ್ಗಲು ಯತ್ನ

ಎನ್. ಎಸ್. ಐ. ರಾಷ್ಟ್ರೀಯ ಭದ್ರತಾ ಸಲಹೆಗಾರ ಮನೆಗೆ ನುಗ್ಗಲು ಯತ್ನ
ಬೆಂಗಳೂರು , ಬುಧವಾರ, 16 ಫೆಬ್ರವರಿ 2022 (14:47 IST)
ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ)ಅಜಿತ್‌ ಡೋಭಾಲ್‌ ಅವರ ದೆಹಲಿ ನಿವಾಸಕ್ಕೆ ನುಗ್ಗಲು ಯತ್ನಿಸಿದ ಆರೋ‍ಪದ ಮೇಲೆ ಬೆಂಗಳೂರು ಮೂಲದ ವ್ಯಕ್ತಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಬುಧವಾರ ಬಂಧಿಸಿದೆ.
ಅಜಿತ್‌ ಡೋಭಾಲ್‌ ಮನೆಯಲ್ಲಿ ಇರುವಾಗಲೇ ಬೆಳಿಗ್ಗೆ 7.30ರ ವೇಳೆಗೆ ಈ ಘಟನೆ ನಡೆದಿದ್ದು, ಕಾರು ಚಲಾಯಿಸಿಕೊಂಡು ನಿವಾಸದ ಆವರಣ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಸಿಐಎಸ್‌ಎಫ್‌ ಯೋಧರು ಬಂಧಿಸಿ, ಪೊಲೀಸರ ವಶಕ್ಕೆ ಒಪ್ಪಿಸಿದರು.
 
ಬಂಧಿತ ವ್ಯಕ್ತಿಯನ್ನು ಶಾಂತನು ರೆಡ್ಡಿ ಎಂದು ಗುರುತಿಸಲಾಗಿದೆ. ಆತ ಮಾನಸಿಕ ಸಮಸ್ಯೆ ಇರುವ ವ್ಯಕ್ತಿಯಂತೆ ಕಾಣುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಜಿತ್‌ ಡೋಭಾಲ್‌ ಅವರಿಗೆ ಝಡ್‌ ಫ್ಲಸ್‌ ಭದ್ರತೆ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿ, ಈಶ್ವರಪ್ಪ ಮಾತಿನ ಚಕಾಮಕಿ