Webdunia - Bharat's app for daily news and videos

Install App

ಅಗಲಿರಲಾಗದೆ ಆತ್ಮಹತ್ಯೆ ಯತ್ನ !

Webdunia
ಶನಿವಾರ, 4 ಜುಲೈ 2015 (09:43 IST)
ಸರ್ಕಾರಿ ಹಾಸ್ಟೆಲ್‍ನಲ್ಲಿದ್ದುಕೊಂಡು ಒಂದೇ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದ ಪ್ರಾಣ ಸ್ನೇಹಿತೆಯರಿಬ್ಬರೂ ಒಬ್ಬರನೊಬ್ಬರು ಅಗಲುವ ಸಮಯ ಬಂತೆಂದು ಆತ್ಮಹತ್ಯೆಗೆ ಪ್ರಯತ್ನಿಸಿದ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.
 
ಪೊಲೀಸ್ ಕಾಲೋನಿಯಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿನಿಯರು ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.ಅವರಿಬ್ಬರ ನರ್ಸಿಂಗ್ ಕೋರ್ಸ್ ಕೊನೆಯ ಹಂತದಲ್ಲಿದ್ದು ಮುಂದಿನ ತಿಂಗಳು ಪರೀಕ್ಷೆ ನಡೆಯಲಿತ್ತು. ಪರೀಕ್ಷೆ ಮುಗಿದ ಮೇಲೆ ತಾವಿಬ್ಬರೂ ಹಾಸ್ಟೆಲ್ ಬಿಟ್ಟು ತಮ್ಮ ತಮ್ಮ ಮನೆಗೆ ತೆರಳುವುದರಿಂದ ಇಬ್ಬರು ದೂರವಾಗುತ್ತೇವೆ ಎಂಬ ನೋವು ಗೆಳತಿಯರಿಬ್ಬರನ್ನು ಕಾಡುತ್ತಿತ್ತು. 
 
ಈ ಹಿನ್ನೆಲೆಯಲ್ಲಿ ಸತ್ತರೂ ಜೊತೆಗೆ ಸಾಯೋಣ ಎಂದು ನಿರ್ಧರಿಸಿದ ವಿದ್ಯಾರ್ಥಿನಿಯರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನೋವಿನಿಂದ ಒದ್ದಾಡುತ್ತಿದ್ದ ಅವರನ್ನು ತಕ್ಷಣ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಕ್ಕಿದ್ದರಿಂದ ಅವರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments