ಅನಧಿಕೃತ ಗೈರು ಹಾಜರಿ ಹಿನ್ನೆಲೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಯ 26 ಸಿಬ್ಬಂದಿಗಳನ್ನು ಸೇವೆಯಿಂದ ವಜಾ ಮಾಡಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ರಾಯಚೂರು ವಿಭಾಗದ ಡಿಸಿ ಸಂತೋಷ್ ಕುಮಾರ್ ಈ ಆದೇಶ ನೀಡಿದ್ದಾರೆ. ಕಳೆದ 6 ತಿಂಗಳಿಂದ ಈ ಸಿಬ್ಬಂದಿಗಳು ಇಲಾಖೆಯ ಅನುಮತಿ ಪಡೆಯದೇ ಕೆಲಸಕ್ಕೆ ಗೈರು ಹಾಜರಾಗಿದ್ದರು ಎಂದು ತಿಳಿದು ಬಂದಿದೆ. ಆ ಕಾರಣಕ್ಕೆ ಡಿಸಿ ಈ ಕಠಿಣ ಕ್ರಮವನ್ನು ಕೈಗೊಂಡಿದ್ದಾರೆ.